ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನದಿ ಅಥವಾ ಕೆರೆಯೊಂದರ ತೀರ ಪ್ರದೇಶವನ್ನು ಕಾಣಬಹುದು. ತೇವಯುತ ಮಣ್ಣಿನ ಮೇಲೆ ಎಲೆಗಳು ಬಿದ್ದಿವೆ ಮತ್ತು ಕಲ್ಲುಗಳು ಸಹ ಇವೆ. ಇವುಗಳ ನಡುವೆ ಒಂದು ಹಾವು ಇದೆ. ಆ ಹಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಅಷ್ಟು ಸುಲಭವಲ್ಲ. ಏಕೆಂದರೆ, ಫೋಟೋದಲ್ಲಿರುವ ವಸ್ತುಗಳ ಬಣ್ಣ ಹಾಗೂ ಹಾವಿನ ಒಂದಕ್ಕೊಂದು ಸಾಮ್ಯತೆ ಇದ್ದು ನೋಡುಗರನ್ನು ಗೊಂದಲಕ್ಕೆ ದೂಡುತ್ತಿದೆ. ಹೀಗಾಗಿ ಮೊದಲ ನೋಟದಲ್ಲಿ ಹಾವು ಎಲ್ಲಿದೆ ಎಂಬುದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಹಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿ ಹಾವು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹಾವನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಾವು ಎಲ್ಲಿದೆ ಎಂದು ಗುರುತಿಸಲು ಸಾಧ್ಯವಾಗದೇ ಪರದಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಹೊಸ ಸಂಸತ್​ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್​ ಎಂದು ಕರೆದ ಜೈರಾಮ್​ ರಮೇಶ್:​ ಕೊಟ್ಟ ಕಾರಣ ಹೀಗಿದೆ….

ಕಾವೇರಿ ಜಲವಿವಾದ; ಮಂಗಳವಾರ ಬೆಂಗಳೂರು ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
