ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ರಾಂಪುರ ಸೆಕ್ಟರ್​ನಲ್ಲಿರುವ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನಿ ಸೇನೆ ನಿನ್ನೆ ಅಪ್ರಚೋದಿತ ದಾಳಿ ನಡೆಸಿತ್ತು. ಬೆಳ್ಳಂಬೆಳಗ್ಗಿನ ಹೊತ್ತಿನಲ್ಲಿ ಈ ದಾಳಿ ನಡೆದಿದ್ದು, ಪಾಕ್ ಸೇನಾಪಡೆ ಮೋರ್ಟಾರ್​ಗಳು ಮತ್ತು ಇತರೆ ಶಸ್ತ್ರಗಳನ್ನು ಬಳಸಿಕೊಂಡಿದೆ. ಈ ದಾಳಿಯಲ್ಲಿ ನಾಲ್ಕು ಮನೆಗಳು ಮತ್ತು ಮಸೀದಿಗೆ ಹಾನಿ ಆಗಿದೆ. ಈ ಭಾಗದ ಅನೇಕ ಜನರನ್ನು ನಿರಾಶ್ರಿತರ ಶಿಬಿರಕ್ಕೆ ಮತ್ತು ನೆಲಮಾಳಿಗೆಯ ಸುರಕ್ಷಿತ ಬಂಕರ್​ಗಳಿಗೆ ಸ್ಥಳಾಂತರಿಸಲಾಗಿದೆ. ಕೆಲವು ಕುಟುಂಬಗಳನ್ನು ಉರಿ ತಾಲೂಕಿನ ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ಸೆರೆ ಸಿಕ್ಕ ಪಾಕ್​ ಉಗ್ರರು: ಭಯಾನಕ ಜಾಲ ಭೇದಿಸಿದ ಭಾರತೀಯ ಯೋಧರು
ಪ್ರಾಣ ಕಳೆದುಕೊಂಡ ಮಹಿಳೆಯನ್ನು ಝರೂರ್​ ಅಹ್ಮದ್ ಚೇಚಿಯ ಪತ್ನಿ ಅಖ್ತರ್ ಬೇಗಂ(48) ಎಂದು ಗುರುತಿಸಲಾಗಿದೆ. ಬತ್​ಗ್ರಾನ್​ ಎಂಬಲ್ಲಿ ಇವರ ಮನೆ ಇದ್ದು, ಪಾಕಿಸ್ತಾನದ ಶೆಲ್ ದಾಳಿಗೆ ಈಡಾಗಿದೆ. ಈ ದಾಳಿಯಲ್ಲಿ ಗಾಯಗೊಂಡ ಇನ್ನೊಬ್ಬಾಕೆ 23 ವರ್ಷ ವಯಸ್ಸು ಎಂದು ರಕ್ಷಣಾ ಪಡೆ ತಿಳಿಸಿದೆ. (ಏಜೆನ್ಸೀಸ್)
ನಾಲ್ವರು ಉಗ್ರರು ಭದ್ರತಾ ಪಡೆ ಗುಂಡಿಗೆ ಬಲಿ: ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರ ಬೇಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + one =
Remember me
