ನವದೆಹಲಿ:ಭಾರತದ ಟೇಬಲ್ ಟೆನಿಸ್ ತಾರೆ ಅರ್ಚನಾ ಕಾಮತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆಟಕ್ಕೆ ವಿದಾಯ ಹೇಳಿದಳು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅರ್ಚನಾ ಕಾಮತ್ ಉತ್ತಮ ಹೋರಾಟ ನಡೆಸಿದ್ದರು. ಟೇಬಲ್ ಟೆನಿಸ್‌ನಲ್ಲಿ, ಒಲಿಂಪಿಕ್ಸ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ತಂಡ ಕ್ವಾರ್ಟರ್ ಫೈನಲ್‌ಗೆ ತಲುಪುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಜರ್ಮನಿ ವಿರುದ್ಧದ ಕ್ವಾರ್ಟರ್‌ನಲ್ಲಿ ಭಾರತ ತಂಡ 1-3 ಅಂತರದಿಂದ ಸೋತಿತ್ತು. ಈ ಪಂದ್ಯದಲ್ಲಿ ಅರ್ಚನಾ ಮಾತ್ರ ಭಾರತಕ್ಕೆ ಜಯ ತಂದುಕೊಟ್ಟಿದ್ದರು. ಇಈದಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಟೇಬಲ್​ ಟೆನಿಸ್​​ಗೆ ವಿದಾಯ ಹೇಳಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ನಂತರ, ಮಾತನಾಡಿರುವ ಆಕೆಯ ಕೋಚ್ ಅನ್ಶುಲ್ ಗಾರ್ಗ್, ನಾಲ್ಕು ವರ್ಷಗಳ ನಂತರ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವುದು ತುಂಬಾ ಕಷ್ಟದ ಕೆಲಸ. ಏಕೆಂದರೆ ಆಕೆ ಟಾಪ್-100ರ‍್ಯಾಂಕ್ಪಟ್ಟಿಯಲ್ಲಿಲ್ಲ. ಕಳೆದೆರಡು ತಿಂಗಳಿಂದ ಕಷ್ಟಪಟ್ಟು ದುಡಿಯುತ್ತಿದ್ದರೂ ವೃತ್ತಿಪರವಾಗಿ ಬೆಳೆಯಲು ಶ್ರಮಿಸಬೇಕಾಗಿದೆ. ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯಲು ನಿರ್ಧರಿಸಿದ್ದಾಳೆ’ ಎಂದು ಹೇಳಿದರು.
24ರ ಹರೆಯದ ಕಾಮತ್ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಸಾಧ್ಯತೆ ಕಡಿಮೆಯಾಗಿದ್ದು, ಆರ್ಥಿಕ ಅಗತ್ಯದ ಕಾರಣ ವೃತ್ತಿಪರ ಆಟದಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 2 =
Remember me
