ನವದೆಹಲಿ:ದೇಶದಲ್ಲಿ ಕಲ್ಲಿದ್ದಲು ಕೊರತೆ ಕಾಡಿದ್ದು, ವಿದ್ಯುತ್​ ಸಮಸ್ಯೆ ಜತೆಗೆ ಇದೀಗ ರೈಲ್ವೆ ವಲಯದ ಮೇಲೂ ಭಾರೀ ಪರಿಣಾಮ ಬೀರಿದೆ.
ಕಲ್ಲಿದ್ದಲು ಬಿಕ್ಕಟ್ಟು ಹಿನ್ನಲೆಯಲ್ಲಿ ರಾಷ್ಟ್ರದ ಹಲವೆಡೆ ಪ್ಯಾಸೆಂಜರ್​ ರೈಲು ಸೇವೆಯನ್ನು ರದ್ದುಗೊಳಿಸಿದೆ. ದೇಶಕ್ಕೆ ಶೇ.70ರಷ್ಟು ವಿದ್ಯುತ್​ ಕಲ್ಲಿದ್ದಲಿನಿಂದ ಪೂರೈಕೆಯಾಗುತ್ತಿದೆ. ಇದೀಗ ಕಲ್ಲಿದ್ದಲು ಕೊರತೆಯಿಂದಾಗಿ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಕೈಗಾರಿಕಾ ವಲಯ ಸಾಕಷ್ಟು ಸಮಸ್ಯೆ ಎದುರಿಸಲಿದ್ದು, ಇದು ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಕ್ರೇನ್​-ರಷ್ಯಾ ಆಕ್ರಮಣದಿಂದಾಗಿ ಬೆಲೆ ನಿಯಂತ್ರಣಕ್ಕೆ ಹೆಣಗಾಡುತ್ತಿರುವ ಸರ್ಕಾರಕ್ಕೆ ಹಣದುಬ್ಬರದಲ್ಲಿ ಮತ್ತಷ್ಟು ಏರಿಕೆ ಅಪಾಯವು ಇದೆ.
ರೈಲ್ವೆ ವಲಯದ ಮೇಲೂ ಪರಿಣಾಮ ಬೀರಿದ್ದು, ಪ್ರಯಾಣಿಕ ರೈಲುಗಳ ಅವಧಿಯನ್ನು ಕಡಿತಗೊಳಿಸಲಾಗಿದ್ದು, ಕೆಲವೆಡೆ ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ಗೌರವ್​ ಕೃಷ್ಣ ಬನ್ಸಾಲ್​ ತಿಳಿಸಿದ್ದಾರೆ.
ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಇಂಧನದ ಕೊರತೆಯಿಂದಾಗಿ ದೂರದವರೆಗೆ ಸರಕು ಬೋಗಿಗಳು ತಲುಪಲು ವಿಳಂಬವಾಗಲಿದೆ ಎಂದು ತಿಳಿಸಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ.ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಎಂದಿದ್ದಾರೆ.
ಪಿಎಸ್​ಐ ಹಗರಣದಲ್ಲಿ ಅಕ್ರಮವೆಸಗಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ: ಪ್ರತಾಪ್​ ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nine =
Remember me
