ನವದೆಹಲಿ:ದಾರಿ ತಪ್ಪಿಸುವ ಜಾಹೀರಾತುಗಳ ಮೇಲೆ ಪತಂಜಲಿ ಕಂಪನಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮದೇವ್​ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ ರದ್ದು ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮದೇವ್​ ಅವರು ಈ ಹಿಂದೆ ನ್ಯಾಯಾಲಯದ ಮುಂದೆ ಕ್ಷಮೆಯಾಚಿಸಿದ್ದರು.
ಪತಂಜಲಿ ಕಂಪನಿಯ ಸಂಸ್ಥಾಪಕ ಬಾಬಾ ರಾಮದೇವ್​ ಮತ್ತು ಕಂಪನಿಯ ಸಿಇಒ ಹಾಗೂ ಚೇರ್ಮನ್​ ಆಚಾರ್ಯ ಬಾಲಕೃಷ್ಣ ಇಬ್ಬರ ವಿರುದ್ಧವೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ನಾವು ಇನ್ನು ಮುಂದೆ ದಾರಿತಪ್ಪಿಸುವ ಯಾವುದೇ ಜಾಹೀರಾತುಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ನ್ಯಾಯಾಯಲಕ್ಕೆ ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ಪ್ರಕರಣವನ್ನು ಉನ್ನತ ನ್ಯಾಯಾಲಯ ರದ್ದು ಮಾಡಿದೆ.
ಇದಕ್ಕೂ ಮುನ್ನ ಅಂದರೆ ಮಾರ್ಚ್​ 21ರಂದು ಪತಂಜಲಿ ಕಂಪನಿಯ ಮ್ಯಾನೇಜಿಂಗ್​ ಡೈರೆಕ್ಟರ್​ ಆಚಾರ್ಯ ಬಾಲಕೃಷ್ಣ, ಸುಪ್ರೀಂಕೋರ್ಟ್​ಗೆ ಅಫಿಡೆವಿಟ್​ ಸಲ್ಲಿಸಿ, ತಮ್ಮ ತಪ್ಪು ಜಾಹಿರಾತುಗಳ ಬಗ್ಗೆ ಪಶ್ಚಾತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದರು. ಆಯುರ್ವೇದದ ಮೂಲಕ ಜೀವನಶೈಲಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯದ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ನಮ್ಮ ಪತಂಜಲಿ ಕಂಪನಿಯ ಅನ್ವೇಷಣೆಯಾಗಿದೆ ಎಂದು ಸ್ಪಷ್ಟಪಡಿಸಿದ ಬಾಲಕೃಷ್ಣ, ಭವಿಷ್ಯದಲ್ಲಿ ಇಂತಹ ತಪ್ಪು ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಾದ ಬಳಿಕ ರಾಮದೇವ್​ ಕೂಡ ಕೋರ್ಟ್​ ಮುಂದೆ ಕ್ಷಮೆಯಾಚಿಸಿದ್ದರು. ಇದೀಗ ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ರದ್ದಾಗಿದೆ.
ತನ್ನ ಜಾಹೀರಾತುಗಳಲ್ಲಿ ಅಲೋಪತಿ ವಿರುದ್ಧ ಪತಂಜಲಿ ಕಂಪನಿ ತಪ್ಪು ಮಾಹಿತಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸುಪ್ರೀಂಕೋರ್ಟ್​ಗೆ ಅರ್ಜಿ ದಾಖಲಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಹೀರಾತುಗಳ ವಿರುದ್ಧ ಆದೇಶ ಹೊರಡಿಸಿತ್ತು. ಆದಾಗ್ಯೂ ಆದೇಶವನ್ನು ಪತಂಜಲಿ ಉಲ್ಲಂಘಿಸಿತ್ತು. ಇದರಿಂದ ಆಕ್ರೋಶಗೊಂಡ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್​ ನೀಡಿ, ಉತ್ತರಿಸುವಂತೆ ತಾಕೀತು ಮಾಡಿತ್ತು. ಅಲ್ಲದೆ, ದಾರಿತಪ್ಪಿಸುವ ಜಾಹೀರಾತುಗಳನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಅಮಾನುಲ್ಲಾ ಅವರು ಖಡಕ್​ ಎಚ್ಚರಿಕೆ ನೀಡಿದ್ದರು.
ಯೋಗದ ಸಹಾಯದಿಂದ ಮಧುಮೇಹ ಮತ್ತು ಅಸ್ತಮಾವನ್ನು ಸಂಪೂರ್ಣವಾಗಿ ಗುಣಪಡಿಸುವುದಾಗಿ ಪತಂಜಲಿಯು ಎಂದು ಹೇಳಿಕೊಂಡಿದೆ. ಅಲ್ಲದೆ, ತನ್ನ ಕಂಪನಿಯ ಉತ್ಪನ್ನಗಳನ್ನು ಬಳಸಿದರೆ ನಿರ್ದಿಷ್ಟ ಕಾಯಿಲೆ ಗುಣವಾಗುತ್ತದೆ ಎಂದು ಸಹ ಪತಂಜಲಿ ಹೇಳಿಕೊಂಡಿತ್ತು. ಅಲ್ಲದೆ, ಆಲೋಪತಿ ಚಿಕಿತ್ಸಾ ವಿಧಾನದ ಬಗ್ಗೆ ತಪ್ಪು ಮಾಹಿತಿ ಹರಡಿದ್ದರಿಂದ ಭಾರತೀಯ ವೈದ್ಯಕೀಯ ಸಂಘ ಕೋರ್ಟ್​ ಮೆಟ್ಟಿಲೇರಿತ್ತು.(ಏಜೆನ್ಸೀಸ್​)
ಆಲ್ಟೊ ಕಾರು ಗಿಫ್ಟ್​ ನೀಡಿ ಚಿನ್ನದ ಹುಡುಗ ನದೀಮ್​ಗೆ ಅವಮಾನ! ಪಾಕಿಸ್ತಾನದಲ್ಲಿ ವ್ಯಕ್ತವಾಯ್ತು ಭಾರಿ ಆಕ್ರೋಶ

ಡಿವೋರ್ಸ್​ ಬಗ್ಗೆ ಮೌನ ಮುರಿದ ಅಭಿಷೇಕ್! ಅಸಲಿ ವಿಚಾರ ತಿಳಿದು ಅಭಿಮಾನಿಗಳ ಆಸೆ ನುಚ್ಚುನೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
