ನವದೆಹಲಿ:ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಕಳೆದ ಮೂರು ದಿನಗಳಿಂದಲೂ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಬಣಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಲುಪಿದೆ. 20 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿಯೇ ಇತ್ತ ಪ್ರತಿಭಟನಾಕಾರರ ಸಂಘರ್ಷವೂ ಹೆಚ್ಚಿತ್ತು. ನಿನ್ನೆಯವರೆಗೂ ಅಮೆರಿಕ ಅಧ್ಯಕ್ಷರ ಜತೆ ದ್ವಿಪಕ್ಷೀಯ ಮಾತುಕತೆ, ಸಭೆಗಳಲ್ಲಿ ತೊಡಗಿಕೊಂಡಿದ್ದ ಪ್ರಧಾನಿ ಮೋದಿಯವರು ಇಂದು ದೆಹಲಿ ಹಿಂಸಾಚಾರ ಬಗ್ಗೆ ಟ್ವೀಟ್ ಮಾಡಿದ್ದಾರೆ.
ದೆಹಲಿಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗಲಭೆ ಪರಿಸ್ಥಿತಿಯ ಬಗ್ಗೆ ವ್ಯಾಪಕ ಪರಿಶೀಲನೆ. ಶಾಂತಿ ಕಾಪಾಡಲು, ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ದೆಹಲಿ ಪೊಲೀಸರು, ಭದ್ರತಾ ಸಿಬ್ಬಂದಿ ಪ್ರಯತ್ನ ಪಡುತ್ತಿದ್ದಾರೆ.
ನಮ್ಮ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯವೇ ಮುಖ್ಯ. ದೆಹಲಿಯ ನನ್ನ ಸಹೋದರ, ಸಹೋದರಿಯರು ದಯವಿಟ್ಟು ಸಹನೆಯಿಂದ ಇರಬೇಕು. ಎಂಥದ್ದೇ ಸಮಯದಲ್ಲೂ ಭ್ರಾತೃತ್ವವನ್ನು ಕಾಪಾಡಬೇಕು. ಆದಷ್ಟು ಶೀಘ್ರವೇ ದೆಹಲಿ ಸಹಜಸ್ಥಿತಿಗೆ ಮರಳುವುದು ತುಂಬ ಮುಖ್ಯ ಎಂದು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)
Peace and harmony are central to our ethos. I appeal to my sisters and brothers of Delhi to maintain peace and brotherhood at all times. It is important that there is calm and normalcy is restored at the earliest.
— Narendra Modi (@narendramodi)February 26, 2020

Had an extensive review on the situation prevailing in various parts of Delhi. Police and other agencies are working on the ground to ensure peace and normalcy.
— Narendra Modi (@narendramodi)February 26, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − eleven =
Remember me
