ರಾಯಪುರ:ದೇಶದಾದ್ಯಂತ ಹಲವೆಡೆ ಆಗಸ್ಟ್ 15ರಂದು ಗಣರಾಜ್ಯೋತ್ಸವ ಆಚರಣೆ ನಡೆದಿದ್ದು ಗೊತ್ತೇ ಇದೆ. ಈ ಕಾರ್ಯಕ್ರಮದಲ್ಲಿ ಪಾರಿವಾಳ ಹಾರದೆ ಕೆಳಗೆ ಬಿದ್ದಿರುವ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಎಸ್​​ಪಿ ಆದೇಶ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ವೈರಲ್​ ಆಗಿದೆ.
ಪ್ರತಿ ವರ್ಷ ಜಂದಾ ವಂದನಾ ಕಾರ್ಯಕ್ರಮಗಳಲ್ಲಿ ಪ್ರೀತಿ, ಸ್ವಾತಂತ್ರ್ಯ ಮತ್ತು ಶಾಂತಿಯ ಸಂಕೇತವೆಂದು ಪರಿಗಣಿಸಲಾದ ಪಾರಿವಾಳಗಳನ್ನು ಹಾರಿಸುವುದು ವಾಡಿಕೆ. ಛತ್ತೀಸ್‌ಗಢದ ಮುಂಗೇಲಿ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಆದರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖಂಡರು ಪಾರಿವಾಳಗಳನ್ನು ಕೈಯಲ್ಲಿ ಹಿಡಿದು ಹಾರಿಸಲು ಯತ್ನಿಸಿದರು. ಈ ಮೂರು ಪಾರಿವಾಳಗಳ ಪೈಕಿ ಎರಡು ಪಾರಿವಾಳಗಳು ಹಾರಿಹೋದವು. ಆದರೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗಿರಿಜಾ ಶಂಕರ್ ಜೈಸ್ವಾಲ್ ಸಾಕಿದ ಪಾರಿವಾಳ ಕೆಳಗೆ ಬಿದ್ದಿದೆ. ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.
ಹಾರಲು ಸಾಧ್ಯವಾಗದ ಪಾರಿವಾಳವನ್ನು ತಂದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಎಸ್ಪಿ ಆಗ್ರಹಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Panchayat-3 Chattisgarh Version🕊️pic.twitter.com/QoxAoTEYps
— Ghar Ke Kalesh (@gharkekalesh)August 19, 2024

ಘಟನೆಗೆ ಅಸಮಾಧಾನ ವ್ಯಕ್ತಪಡಿಸಿರುವ ಎಸ್ಪಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
‘ಸ್ವಾತಂತ್ರ್ಯ ದಿನದಂತಹ ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಪಾರಿವಾಳ ನೆಲಕ್ಕೆ ಬಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಇತರೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತದೆ. ಅನಾರೋಗ್ಯದ ಪಾರಿವಾಳದ ಪ್ರದರ್ಶನದಿಂದಾಗಿ ಇದು ಸಂಭವಿಸಿದೆ. ಮುಖ್ಯ ಅತಿಥಿಯಾಗಿದ್ದ ಶಾಸಕರ ಕೈಯಲ್ಲೂ ಇದೇ ಆಗಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಹೀಗಾಯಿತು ಎಂದು ಆ.20ರಂದು ಜಿಲ್ಲಾಧಿಕಾರಿಗೆ ಎಸ್ಪಿ ಕಳುಹಿಸಿದ್ದ ಪತ್ರದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − sixteen =
Remember me
