ನವದೆಹಲಿ:ವಿವಿಧ ಹಣಕಾಸು ಅಕ್ರಮ, ತೆರಿಗೆ ವಂಚನೆ ಮತ್ತು ಭ್ರಷ್ಟಾಚಾರ ನಿಗ್ರಹ ವಿಶೇಷ ಕೋರ್ಟ್​ ಜಿಲ್ಲೆಗೊಂದರಂತೆ ಒಂದು ವರ್ಷದೊಳಗೆ ಸ್ಥಾಪಿಸಲು ಎಲ್ಲ ಹೈಕೋರ್ಟ್​ಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸುಪ್ರೀಂ ಕೋರ್ಟ್​ನಲ್ಲಿ ದಾಖಲಾಗಿದೆ.
ಬಿಜೆಪಿ ನಾಯಕ ಹಿರಿಯ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ್​ ಈ ಪಿಐಎಲ್​ ದಾಖಲಿಸಿದ್ದು, ಜಿಲ್ಲೆಗೊಂದರಂತೆ ಭ್ರಷ್ಟಾಚಾರ ನಿಗ್ರಹ ವಿಶೇಷ ಕೋರ್ಟ್​ ಸ್ಥಾಪಿಸುವುದಕ್ಕೆ ಹೈಕೋರ್ಟ್​ಗಳಿಗೆ ಸೂಚನೆ ನೀಡಬೇಕು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಗೃಹ ಸಚಿವಾಲಯ, ಕಾನೂನು ಸಚಿವಾಲಯ ಮತ್ತು ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳನ್ನು ಪ್ರತಿವಾದಿಯನ್ನಾಗಿಸಿದ್ದಾರೆ.
ಇದನ್ನೂ ಓದಿ:ಮಕ್ಕಳಾಗಿಲ್ಲವೆಂದು ಇನ್ನೊಂದು ಮದ್ವೆಯಾದರೆ ಇಬ್ರಿಗೂ ಮಕ್ಕಳಾದವು: ಈಗ ಆಸ್ತಿಯ ಭಾಗ ಹೇಗೆ?
ಅಡ್ವೋಕೇಟ್​ ಅಶ್ವನಿ ಕುಮಾರ್ ದುಬೆ ಅವರ ಮೂಲಕ ಈ ಪಿಐಎಲ್​ ಹಾಕಿಸಿರುವ ಉಪಾಧ್ಯಾಯ್​, ವಿವಿಧ ಕೋರ್ಟ್​ಗಳಲ್ಲಿ ಬಹುಕಾಲದಿಂದ ಬಾಕಿ ಇರುವ ಹಣಕಾಸಿನ ಅಕ್ರಮ ಮತ್ತು ಇತರೆ ಸಂಬಂಧಿತ ಕೇಸ್​ಗಳ ವಿಚಾರವನ್ನು ಎತ್ತಿ ತೋರಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ, ಗಣತಂತ್ರವಾಗಿ 70 ವರ್ಷಗಳಾಗಿದ್ದರೂ ಕಾಳಧನ, ಬೇನಾಮಿ ಆಸ್ತಿ, ಆದಾಯ ಮೀರಿದ ಆಸ್ತಿ, ಲಂಚ, ಲೇವಾದೇವಿ, ತೆರಿಗೆ ವಂಚನೆ ಮತ್ತು ಇತರೆ ಪ್ರಕರಣಗಳ ವಿಚಾರಣೆ ಸಮಪರ್ಕವಾಗಿ ಪೂರ್ತಿಗೊಳ್ಳದೇ ಬಾಕಿ ಉಳಿದಿದೆ. ಇದನ್ನು ತಪ್ಪಿಸುವ ಸಲುವಾಗಿ ತ್ವರಿತವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. (ಏಜೆನ್ಸೀಸ್)
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಕೆಲವರಷ್ಟೇ ಚರ್ಚಾ ಟೇಬಲ್​ನಲ್ಲಿದ್ದರೆ ಜಾಗತಿಕ ಬೆಳವಣಿಗೆಯಾಗದು: ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eight =
Remember me
