ತಿರುಪತಿ:ಪೈಲಟ್‌ ಒಬ್ಬರ ಸಮಯಪ್ರಜ್ಞೆಯಿಂದ 75 ಮಂದಿ ಪ್ರಯಾಣಿಕರ ಜೀವ ಉಳಿದಿರುವ ಘಟನೆ ತಿರುಪತಿಯಲ್ಲಿ ನಿನ್ನೆ ನಡೆದಿದೆ.
ಹೈದರಾಬಾದ್‌-ತಿರುಪತಿ-ಬೆಂಗಳೂರು ಮಧ್ಯೆ ಸಂಚಿಸಲಿರುವ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನವೊಂದು ಭಾರಿ ಅಪಘಾತಕ್ಕೆ ಈಡಾಗುವ ಸಂಭವವಿತ್ತು.ಈ ಮಧ್ಯೆಯೇ ಪೈಲಟ್‌ ಸಮಯಪ್ರಜ್ಞೆ ತೋರಿದ್ದರಿಂದ ಪ್ರಯಾಣಿಕರ ಜೀವ ಉಳಿದಿದೆ. ತಿರುಪತಿಯಲ್ಲಿ ಇಳಿಯಬೇಕಿದ್ದ ವಿಮಾನವನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ತಂದು ಇಳಿಸಲಾಗಿದೆ.
ನಿನ್ನೆ (ಭಾನುವಾರ) ಬೆಳಗ್ಗೆ ಈ ವಿಮಾನವು 41 ಪ್ರಯಾಣಿಕರನ್ನು ಇಳಿಸುವ ಸಂಬಂಧ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿತ್ತು.
ಇದನ್ನೂ ಓದಿ:ಡಾನ್ಸ್‌ಬಾರ್‌ಗಳಿಗೆ ಯುವತಿಯರ ಸರಬರಾಜು: ಆರೋಪಿಯ ಬಂಧನ
ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿರುವಾಗಲೇ ರನ್‌ವೇದಲ್ಲಿ ಅಗ್ನಿಶಾಮಕದಳದ ವಾಹನ ಕಂಡಿದೆ. ಅಪಘಾತಕ್ಕೀಡಾಗಿದ್ದ ವಾಹನವು ರನ್‌ವೇದಲ್ಲಿ ನಿಂತಿತ್ತು.ಸ್ವಲ್ಪ ತಪ್ಪಿದ್ದರೂ ವಿಮಾನ ಅಲ್ಲಿಯೇ ಸ್ಫೋಟಗೊಳ್ಳುವ ಸಾಧ್ಯತೆ ಇತ್ತು. ಕೂಡಲೇ ಸಮಯಪ್ರಜ್ಞೆ ತೋರಿದ ಪೈಲಟ್‌ ವಿಮಾನವನ್ನು ಇಳಿಸುವ ಬದಲು ಟೇಕ್‌ಆಫ್‌ ಮಾಡಿ ಬೆಂಗಳೂರಿನ ಕಡೆಗೆ ಪ್ರಯಾಣಿಸಿದರು. ಇದರಿಂದಾಗಿ ಎಲ್ಲಾ ಪ್ರಯಾಣಿಕರು ಬಚಾವಾಗಿದ್ದಾರೆ.
ಇದರಿಂದಾಗಿ ವಿಮಾನ ಹಾರಾಟದಲ್ಲಿ ಮೂರು ಗಂಟೆ ವ್ಯತ್ಯಯವಾಗಿದೆ.(ಏಜೆನ್ಸೀಸ್‌)
ಮಂಗಳನ ಅಂಗಳಕೆ ಹಾರಿತು ‘ಹೋಪ್‌’ ಗಗನನೌಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − two =
Remember me
