ರಾಂಚಿ:ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ), 36 ಲಕ್ಷ ರೂಪಾಯಿ ನಗದು, ಎರಡು ಕಾರು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಈ ಬಳಿಕ ನಾಪತ್ತೆಯಾಗಿದ್ದ ಸಿಎಂ ಮಂಗಳವಾರ (ಇಂದು) ಇ.ಡಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ಜನವರಿ 31ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೇಳಿಕೆ ನೀಡಲು ಸೊರೇನ್ ಸಮ್ಮತಿ ಸೂಚಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ನಿಶಾಂತ್ ದುಬೆ, ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್ ನೂತನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ತಲೆಮರೆಸಿಕೊಂಡಿರುವ ಹೇಮಂತ್ ಸೊರೇನ್ ಹೇಗೆ ರಾಜ್ಯದ ಜನರನ್ನು ರಕ್ಷಿಸುತ್ತಾರೆ? ಎಂದು ಟ್ವಿಟರ್ ನಲ್ಲಿ ದುಬೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ತಿರುಮಲ ತಿಮ್ಮಪ್ಪನಿಗೆ ಬರೋಬ್ಬರಿ 5,142 ಕೋಟಿ ರೂ. ಬಜೆಟ್‌! ಹುಂಡಿಯಿಂದ ಬರುವ ಮೊತ್ತ ಕೇಳಿದ್ರೆ ಬೆರಗಾಗ್ತೀರಾ ?
Jharkhand CM Hemant Soren remains untraceable. Enforcement Directorate has recovered Rs 36 lakhs in cash and also seized two cars from the Delhi residence of Jharkhand CM Hemant Soren during the probe into a money laundering case linked to an alleged land scam: Sourcespic.twitter.com/Hx605sZAiW
— ANI (@ANI)January 30, 2024

ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಸೋಮವಾರ ಆರಂಭವಾದ ನಂತರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಬಂದಿದ್ದ ಇಡಿಗೆ ಸಂಬಂಧಿಸಿದ ಮೂಲಗಳು, ಸೊರೇನ್ ನಾಪತ್ತೆಯಾಗಿದ್ದಾರೆ ಮತ್ತು ಅವರ ಎಲ್ಲಾ ಫೋನ್‌ಗಳು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಸುಮಾರು 13 ತಾಸುಗಳವರೆಗೆ ಇ.ಡಿ ಅಧಿಕಾರಿಗಳು ಸೊರೇನ್ ಹೇಳಿಕೆ ದಾಖಲಿಸಲು ಕಾದು ಕುಳಿತಿದ್ದರು.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಸೋಮವಾರ ಮುಖ್ಯಮಂತ್ರಿ ನಿವಾಸ ಬಳಿ 144 ಸೆಕ್ಷನ್ ಜಾರಿ, ರಾಜಭವನ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ಇಡಿಯಿಂದ ಸೋರೆನ್‌ಗೆ ಕಿರುಕುಳ ನೀಡಿರುವುದನ್ನು ವಿರೋಧಿಸಿ ನೂರಾರು ಜೆಎಂಎಂ ಕಾರ್ಯಕರ್ತರು ಸೋಮವಾರ ರಾಂಚಿಯಲ್ಲಿ ಬೃಹತ್ ರ್ಯಾಲಿ ನಡೆಸಿದರು. ಜಮ್ಶೆಡ್‌ಪುರ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಪ್ರತಿಭಟನೆಗಳು ನಡೆದವು.
Section 144 CrPc imposed within 100 meters radius of Jharkhand CM Hemant Soren's residence, Raj Bhavan and ED office in Ranchipic.twitter.com/0A67WQykf5
— ANI (@ANI)January 30, 2024

ಈ ಎಲ್ಲ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಂದು ಚರ್ಚೆ ನಡೆಸಲು ಆಡಳಿತಾರೂಢ ಜಾರ್ಖಂಡ್‌ ಮುಕ್ತಿ ಮೋರ್ಚಾದ (ಜೆಎಂಎಂ) ನೇತೃತ್ವದ ಮೈತ್ರಿ ಸರ್ಕಾರದ ಎಲ್ಲ ಶಾಸಕರು ರಾಂಚಿಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೋರೆನ್ ಜನವರಿ 27 ರಂದು ರಾಂಚಿಯಿಂದ ದೆಹಲಿಗೆ ತೆರಳಿದರು. ಅವರು ವೈಯಕ್ತಿಕ ಕೆಲಸದ ನಿಮಿತ್ತ ತೆರಳಿದ್ದು, ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ ಎಂದು ಅವರ ಪಕ್ಷ ಸೋಮವಾರ ತಿಳಿಸಿದೆ. ಆದಾಗ್ಯೂ, ಜಾರಿ ನಿರ್ದೇಶನಾಲಯದ (ಇಡಿ) ಕ್ರಮಕ್ಕೆ ಹೆದರಿ ರಾಜ್ಯ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಳೆದ 18 ಗಂಟೆಗಳಿಂದ ತಲೆಮರೆಸಿಕೊಂಡಿದ್ದಾರೆ ಎಂದು ಬಿಜೆಪಿ ಜಾರ್ಖಂಡ್ ಘಟಕ ಸೋಮವಾರ ಹೇಳಿಕೊಂಡಿದೆ.
“ಮುಖ್ಯಮಂತ್ರಿ ಅವರು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾರೆ ಮತ್ತು ಅವರು ಹಿಂತಿರುಗುತ್ತಾರೆ, ಅವರಿಗೆ ಜನವರಿ  ನಾವು ಜನವರಿ 31ಕ್ಕೆ ವಿಚಾರಣೆ ಎದುರಿಸಲು ಸಿದ್ಧರಿದ್ದೇವೆ. ನೀವು ನಮಗೆ ಸ್ಥಳ ಮತ್ತು ಸಮಯವನ್ನು ತಿಳಿಸಲು ನಮಗೆ ಕೇಳಿದ್ದೀರಿ ಮತ್ತು ನಾವು ನಿಮಗೆ ಸ್ಥಳವನ್ನು ಹೇಳಿದ್ದೇವೆ. ಕಂಕೆ ರಸ್ತೆಯಲ್ಲಿರುವ ಸಿಎಂ ಅವರ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆ ಸಿಎಂ ಹೇಳಿಕೆ ನೀಡಿ ವಿಚಾರಣೆ ಎದುರಿಸಲಿದ್ದಾರೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ನೀಡಲಾಗಿದೆ. ಹಾಗಾದರೆ ಎಲ್ಲ ಗೊಂದಲಗಳನ್ನು ಸೃಷ್ಟಿಸುತ್ತಿರುವವರು ಯಾರು? ರಾಜಕೀಯ ಪರಿಸ್ಥಿತಿಯನ್ನು ಪ್ರಸ್ತುತಪಡಿಸುತ್ತಿರುವ ರೀತಿ ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
ಡ್ರಗ್ಸ್​ ಸಮೇತ ಸಿಕ್ಕಿಬಿದ್ದ ಟಾಲಿವುಡ್ ನಾಯಕನ ಗೆಳತಿ ! ಕೋರ್ಟ್​ಗೆ ಹಾಜರುಪಡಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 13 =
Remember me
