ಅಸ್ಸಾಂ:ಈಶಾನ್ಯ ರಾಜ್ಯಗಳಲ್ಲಿ ತಮ್ಮ ಸರ್ಕಾರ 5 ವರ್ಷಗಳಲ್ಲಿ ಸಾಧಿಸಿದ್ದನ್ನು ಸಾಧಿಸುವುದಕ್ಕೆ ಕಾಂಗ್ರೆಸ್ ಗೆ 20 ವರ್ಷ ಬೇಕಾಗುತ್ತಿತ್ತು ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ರಾಜಕೀಯಕ್ಕೆ ಅಖಾಡಕ್ಕೆ ಟಾಲಿವುಡ್ ನಟ! ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ?
ಅರುಣಾಚಲ ಪ್ರದೇಶದಲ್ಲಿ ಸಿದ್ಧಗೊಂಡಿರುವ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ವಿಶ್ವದ ಅತಿ ಉದ್ದದ ಸೆಲಾ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಅರುಣಾಚಲ ಪ್ರದೇಶದ ಇಟಾನಗರದಲ್ಲಿ 55,600 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಭಾರತದ ವ್ಯಾಪಾರ, ಪ್ರವಾಸೋದ್ಯಮ, ದಕ್ಷಿಣ ಮತ್ತು ಪೂರ್ವ ಏಷ್ಯಾದ ಇತರ ಸಂಬಂಧಗಳಲ್ಲಿ ನಮಗೆ ಈಶಾನ್ಯವು ಬಲವಾದ ಕೊಂಡಿಯಾಗಲಿದೆ. ಇಂದು ಅರುಣಾಚಲ ಪ್ರದೇಶದ 35 ಸಾವಿರ ಬಡ ಕುಟುಂಬಗಳು ತಮ್ಮ ಶಾಶ್ವತ ಮನೆಗಳನ್ನು ಪಡೆದಿವೆ. ಅರುಣಾಚಲ ಪ್ರದೇಶ ಮತ್ತು ತ್ರಿಪುರಾದಲ್ಲಿ ಸಾವಿರಾರು ಕುಟುಂಬಗಳು ನೀರಿನ ನಲ್ಲಿ ಸಂಪರ್ಕ ಪಡೆದಿವೆ. ಈಶಾನ್ಯದ ವಿವಿಧ ರಾಜ್ಯಗಳಲ್ಲಿ ಸಂಪರ್ಕಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಾಗುತ್ತಿದೆ ಎಂದರು.
ನಾವು ಈಶಾನ್ಯ ರಾಜ್ಯದಲ್ಲಿ 5 ವರ್ಷಗಳಲ್ಲಿ ಮಾಡಿದ್ದನ್ನು ಮಾಡುವುದಕ್ಕೆ ಕಾಂಗ್ರೆಸ್ ಗೆ 20 ವರ್ಷಗಳ ಅವಧಿ ಬೇಕಾಗುತ್ತಿತ್ತು. ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ‘ಮೋದಿ ಗ್ಯಾರಂಟಿ’ ಏನೆಂಬುದನ್ನು ಸ್ಪಷ್ಟವಾಗಿ ನೋಡಬಹುದು ಮೋದಿ ಗ್ಯಾರಂಟಿ ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ಇಡೀ ಈಶಾನ್ಯ ರಾಜ್ಯವೇ ಗಮನಿಸುತ್ತಿದೆ ಎಂದರು.
ತಾವು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವುದರಿಂದ ವಿರೋಧ ಪಕ್ಷದ ಭಾರತದ ನಾಯಕರು ತಮ್ಮ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು. ತಾವು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವುದರಿಂದ ವಿರೋಧ ಪಕ್ಷದ ಭಾರತದ ನಾಯಕರು ತಮ್ಮ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.
ಮೋದಿ ಗ್ಯಾರಂಟಿ ಏನೆಂಬುದನ್ನು ಅರುಣಾಚಲದಲ್ಲಿ ನೋಡಿ:ಮೋದಿ ಗ್ಯಾರಂಟಿ ಏನು ಎಂಬುದನ್ನು ಅರುಣಾಚಲಕ್ಕೆ ಬಂದರೆ ಸ್ಪಷ್ಟವಾಗಿ ನೋಡಬಹುದು. ಮೋದಿಯವರ ಗ್ಯಾರಂಟಿ ಹೇಗಿದೆ ಎಂಬುದನ್ನು ಇಡೀ ಈಶಾನ್ಯವೇ ನೋಡುತ್ತಿದೆ. ಸ್ವಾತಂತ್ರ್ಯ ಬಂದ ನಂತರ 2014ರವರೆಗೆ 10 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ 6 ಸಾವಿರ ಕಿ.ಮೀ.ಗೂ ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್​ 7 ದಶಕಗಳಲ್ಲಿ ಮಾಡಿದ ಕೆಲಸವನ್ನು ನಾವು 1 ದಶಕದಲ್ಲಿ ಮಾಡಿದ್ದೇವೆ ಎಂದು ಮೋದಿ ಹೇಳಿದರು.
ಲೋಕಸಮರಕ್ಕೆ ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
