ನವದೆಹಲಿ:ಇಡೀ ದೇಶವು ಮಣಿಪುರ ಜನರೊಂದಿಗೆ ಸದಾ ನಿಂತಿದೆ. ಶಾಂತಿಯಿಂದ ಮಾತ್ರ ಯಾವುದೇ ಬಿಕ್ಕಟ್ಟಿಗೂ ಪರಿಹಾರವನ್ನು ಕಂಡುಕೊಳ್ಳಬಹುದು ಎನ್ನುವ ಮೂಲಕ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರ ಜನರಲ್ಲಿ ಶಾಂತಿಗಾಗಿ ಮನವಿ ಮಾಡಿದರು.
ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ಕೆಂಪುಕೋಟೆಯಲ್ಲಿ 10ನೇ ಬಾರಿ ಧ್ವಜಾರೋಹಣ ನೇರವೇರಿಸಿದ ಬಳಿಕ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ:ಸ್ವತಂತ್ರ ಭಾರತ, ಆಗಲಿ ವಿಶ್ವವಂದಿತ: 77ನೇ ಸ್ವಾತಂತ್ರ್ಯೋತ್ಸವ
ಭಾಷಣದ ಆರಂಭದಲ್ಲಿ ಪ್ರಧಾನಿ ಮೋದಿ ದೇಶದ ಜನತೆಗೆ 77ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಬಳಿಕ ಮಾತು ಮುಂದುವರಿಸಿದ ಪ್ರಧಾನಿ ಮೋದಿ, ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಪ್ರಸ್ತುತ ಜನಸಂಖ್ಯೆಯ ದೃಷ್ಟಿಯಿಂದ ಮುಂಚೂಣಿಯಲ್ಲಿರುವ ದೇಶ. ಇಂತಹ ದೊಡ್ಡ ದೇಶ ಹಾಗೂ 140 ಕೋಟಿ ಸದಸ್ಯರಿರುವ ನನ್ನ ಕುಟುಂಬ ಇಂದು 77ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದೆ ಎಂದರು.
ಈ ಶುಭ ಸಂದರ್ಭದಲ್ಲಿ ನಾವು ನಮ್ಮ ವೀರರನ್ನು ನೆನೆಯಲೇಬೇಕು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಲಿದಾನ ಮಾಡಿ ದೇಶಕ್ಕೆ ಅಮೂಲ್ಯ ಕೊಡುಗೆಯನ್ನು ನೀಡಿದ ಎಲ್ಲ ವೀರ ಹೃದಯಗಳಿಗೆ ನಾನು ನಮನಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದೇ ವೇಳೆ ಮಣಿಪುರ ಹಿಂಸಾಚಾರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಕೆಂಪು ಕೋಟೆಯಲ್ಲಿ ನಿಂತು ಮಣಿಪುರದಲ್ಲಿ ಶಾಂತಿಗಾಗಿ ಮನವಿ ಮಾಡಿದರು. ಇಡೀ ದೇಶವು ಮಣಿಪುರದ ಜನರೊಂದಿಗೆ ನಿಂತಿದೆ. ಶಾಂತಿಯಿಂದ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಪರಿಹಾರ ಕಂಡುಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಈ ಬಾರಿ ಉಂಟಾದ ನೈಸರ್ಗಿಕ ವಿಕೋಪವು ದೇಶದ ಹಲವಾರು ಭಾಗಗಳಲ್ಲಿ ಊಹಿಸಲಾಗದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಇದನ್ನು ಎದುರಿಸಿದ ಎಲ್ಲ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದರು. ನಮ್ಮಲ್ಲಿ ಜನಸಂಖ್ಯಾಶಾಸ್ತ್ರ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ ಇದೆ. ಈ ಮೂರೂ ಒಟ್ಟಾಗಿ ರಾಷ್ಟ್ರದ ಕನಸುಗಳನ್ನು ನನಸಾಗಿಸುವ ಸಾಮರ್ಥ್ಯವನ್ನು ಹೊಂದಿವೆ. ದೇಶದಲ್ಲಿ ಅವಕಾಶಗಳ ಕೊರತೆ ಇಲ್ಲ. ದೇಶವು ಅಂತ್ಯವಿಲ್ಲದ ಅವಕಾಶಗಳನ್ನು ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದರು.
ಕೋವಿಡ್ 19 ಸಾಂಕ್ರಾಮಿಕದ ನಂತರ, ಹೊಸ ವಿಶ್ವ ಕ್ರಮಾಂಕ, ಹೊಸ ಭೌಗೋಳಿಕ-ರಾಜಕೀಯ ಸಮೀಕರಣವು ರೂಪುಗೊಳ್ಳುತ್ತಿದೆ. ಭೌಗೋಳಿಕ ರಾಜಕೀಯದ ವ್ಯಾಖ್ಯಾನವು ಬದಲಾಗುತ್ತಿದೆ. ಇಂದು ದೇಶದ 140 ಕೋಟಿ ಸಾಮರ್ಥ್ಯವು ಹೊಸ ವಿಶ್ವ ಕ್ರಮವನ್ನು ರೂಪಿಸುತ್ತಿರುವುದನ್ನು ಕಾಣಬಹುದು ಎಂದರು.
ಭಾರತದ ಸಾಮರ್ಥ್ಯ ಮತ್ತು ಸಾಧ್ಯತೆಗಳು ನಂಬಿಕೆಯ ಹೊಸ ಎತ್ತರವನ್ನು ದಾಟಲಿವೆ ಎಂಬುದು ಖಚಿತವಾಗಿದೆ. ನಂಬಿಕೆಯ ಈ ಹೊಸ ಎತ್ತರಗಳು ಹೊಸ ಸಾಮರ್ಥ್ಯಗಳೊಂದಿಗೆ ಮುಂದುವರಿಯುತ್ತವೆ. ಇಂದು ಭಾರತವು G20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ವರ್ಷದಲ್ಲಿ, G20ನ ಹಲವಾರು ಕಾರ್ಯಕ್ರಮಗಳು ಭಾರತದ ಮೂಲೆ ಮೂಲೆಯಲ್ಲಿ ನಡೆದಿರುವುದು ಭಾರತದ ಸಾಮಾನ್ಯ ಜನರ ಸಾಮರ್ಥ್ಯ, ಭಾರತದ ವೈವಿಧ್ಯತೆಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ ಎಂದು ಹೇಳಿದರು.
ಇದನ್ನೂ ಓದಿ:ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸೋಣ: 77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಶುಭ ಕೋರಿದ ಪ್ರಧಾನಿ
ಕರೊನಾದಿಂದ ಜಗತ್ತು ಇನ್ನೂ ಚೇತರಿಸಿಕೊಂಡಿಲ್ಲ. ಈ ಸಾಂಕ್ರಮಿಕ ಯುದ್ಧವು ಮತ್ತೊಂದು ಬಿಕ್ಕಟ್ಟಿಗೆ ಕಾರಣವಾಯಿತು. ಇಂದು ಜಗತ್ತು ಹಣದುಬ್ಬರದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಣದುಬ್ಬರವು ಇಡೀ ಜಾಗತಿಕ ಆರ್ಥಿಕತೆಯನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿದೆ. ನಾವು ನಮ್ಮ ಅಗತ್ಯದ ಸರಕುಗಳನ್ನು ಆಮದು ಮಾಡಿಕೊಳ್ಳುವಾಗ, ಹಣದುಬ್ಬರವನ್ನೂ ಆಮದು ಮಾಡಿಕೊಳ್ಳುವುದು ದುರದೃಷ್ಟಕರವಾಗಿದೆ. ಆದರೆ, ಭಾರತವು ಹಣದುಬ್ಬರವನ್ನು ನಿಯಂತ್ರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತು. ನಮ್ಮ ಪರಿಸ್ಥಿತಿಯು ಪ್ರಪಂಚದ ಉಳಿದ ಭಾಗಗಳಿಗಿಂತ ಉತ್ತಮವಾಗಿದೆ ಎಂದು ನಾವು ಸುಮ್ಮನಿರಲು ಸಾಧ್ಯವಿಲ್ಲ. ನನ್ನ ದೇಶದ ನಾಗರಿಕರ ಮೇಲೆ ಹಣದುಬ್ಬರದ ಹೊರೆ ಮತ್ತಷ್ಟು ಇಳಿಯುವುದನ್ನು ನೋಡಲು ಇನ್ನು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನಾವು ಆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಮತ್ತು ನನ್ನ ಪ್ರಯತ್ನಗಳು ಮುಂದುವರಿಯುತ್ತವೆ ಎಂದರು.
2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ 10ನೇ ಸ್ಥಾನದಲ್ಲಿದ್ದೆವು. ಇಂದು 140 ಕೋಟಿ ಭಾರತೀಯರ ಪ್ರಯತ್ನದಿಂದ ನಾವು ಐದನೇ ಸ್ಥಾನವನ್ನು ತಲುಪಿದ್ದೇವೆ. ಇದು ಸುಮ್ಮನೇ ಆಗಲಿಲ್ಲ. ದೇಶವನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿದ್ದ ಭ್ರಷ್ಟಾಚಾರದ ರಾಕ್ಷಸ ಹಾಗೂ ಸೋರಿಕೆಯನ್ನು ತಡೆದಿದ್ದಕ್ಕೆ ಇಂದು ಬಲವಾದ ಆರ್ಥಿಕತೆಯನ್ನು ರಚಿಸಿದ್ದೇವೆ ಎಂದರು.
ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ವಿಶ್ವಕರ್ಮ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ. ಸುಧಾರಣೆ, ಸಾಧನೆ ಮತ್ತು ಪರಿವರ್ತನೆ ದೇಶವನ್ನು ಬದಲಾಯಿಸುತ್ತಿವೆ. ದೇಶವನ್ನು ಮುಂದೆ ಕೊಂಡೊಯ್ಯುವ ಒಂದು ವಿಷಯವೆಂದರೆ ಮಹಿಳಾ ನೇತೃತ್ವದ ಅಭಿವೃದ್ಧಿ. ಇಂದು, ಭಾರತವು ನಾಗರಿಕ ವಿಮಾನಯಾನದಲ್ಲಿ ಗರಿಷ್ಠ ಸಂಖ್ಯೆಯ ಮಹಿಳಾ ಪೈಲಟ್‌ಗಳನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಮಹಿಳಾ ವಿಜ್ಞಾನಿಗಳು ಚಂದ್ರಯಾನ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ. G20 ದೇಶಗಳು ಸಹ ಮಹಿಳಾ ನೇತೃತ್ವದ ಅಭಿವೃದ್ಧಿಯ ಪ್ರಾಮುಖ್ಯತೆಯನ್ನು ಗುರುತಿಸುತ್ತಿವೆ ಎಂದರು.
ಕೆಂಪುಕೋಟೆಯಲ್ಲಿ 10ನೇ ಬಾರಿ ಧ್ವಜಾರೋಹಣ ನೆರವೇರಿಸಿ ದಾಖಲೆ ಬರೆದ ಪ್ರಧಾನಿ ಮೋದಿ

77ನೇ ಸ್ವಾತಂತ್ರ್ಯೋತ್ಸವ: ರಾಜ್​ಘಾಟ್​ನಲ್ಲಿರುವ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
