ನವದೆಹಲಿ:ಸತತ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಮೋದಿಯವರ ಹೊಸ ಅಧಿಕಾರಾವಧಿಯ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಇಟಲಿಯ ಫಾಸಾನೊದಲ್ಲಿ ಇಂದಿನಿಂದ ಆರಂಭವಾಗಿರುವ ಜಿ7 ಶೃಂಗಸಭೆ ಶನಿವಾರದವರೆಗೂ ನಡೆಯಲಿದೆ. ಮೂರು ದಿನಗಳು ನಡೆಯುವ ಈ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ.
ಇದನ್ನು ಓದಿ:1,563 ವಿದ್ಯಾರ್ಥಿಗಳಿಗೆ ನೀಡಿದ್ದ ಗ್ರೇಸ್ ಮಾರ್ಕ್ಸ್​​​​ ರದ್ದು; ಜೂ.23ರ ಮರುಪರೀಕ್ಷೆ ಶಿಫಾರಸಿಗೆ ಸುಪ್ರೀಂ ಅಸ್ತು
ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಪ್ರಮುಖ ವಿಷಯಗಳ ಕುರಿತು ಜಾಗತಿಕ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಭಾರತ ಮತ್ತು ಜಾಗತಿಕ ದಕ್ಷಿಣಕ್ಕೆ ಶೃಂಗಸಭೆಯು ಉತ್ತಮ ಅವಕಾಶವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಈ ಶೃಂಗಸಭೆಯಲ್ಲಿ ಇದು ಭಾರತದ 11ನೇ ಭಾಗವಹಿಸುವಿಕೆಯಾದರೆ, ಪ್ರಧಾನಿ ಮೋದಿಯವರ ಸತತ ಐದನೇ ಭಾಗವಹಿಸುವಿಕೆಯಾಗಿದೆ.
ಜಿ7 ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.ಈ ವರ್ಷ ಜಿ-7 ಶೃಂಗಸಭೆಯ ಅಧ್ಯಕ್ಷತೆಯನ್ನು ಇಟಲಿ ವಹಿಸಿದೆ. ಅಧಿವೇಶನದಲ್ಲಿ ಕೃತಕ ಬುದ್ಧಿಮತ್ತೆ, ಹವಾಮಾನ ಬದಲಾವಣೆ ಮತ್ತು ಪೂರೈಕೆ ಸರಪಳಿಯಂತಹ ಕೆಲವು ಹೊಸ ಪ್ರಮುಖ ಸವಾಲುಗಳ ಹೊರತಾಗಿ, ಉಕ್ರೇನ್ ಮತ್ತು ಮಧ್ಯಪ್ರಾಚ್ಯದಲ್ಲಿ ಯುದ್ಧದ ಅದರ ಪರಿಣಾಮಗಳಿಗೆ ಸಂಪೂರ್ಣ ಪ್ರಾಮುಖ್ಯತೆಯನ್ನು ನೀಡುವ ಸಾಧ್ಯತೆಯಿದೆ.
ಈಗಾಗಲೇ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಉದ್ವಿಗ್ನತೆ ಕಂಡುಬರುತ್ತಿದೆ. ಏತನ್ಮಧ್ಯೆ ಭಾರತ ಮತ್ತು ಕೆನಡಾ ಎರಡೂ ಪ್ರಧಾನಿಗಳು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಬ್ಬರು ಉಭಯ ನಾಯಕರು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಭಾರತ ವಿರೋಧಿ ಶಕ್ತಿಗಳು ಕೆನಡಾದಲ್ಲಿ ರಾಜಕೀಯ ಜಾಗವನ್ನು ಪಡೆಯುವ ವಿಧಾನ ಇಂದಿನ ದೊಡ್ಡ ಸಮಸ್ಯೆಯಾಗಿದೆ. ಇದು ಭಾರತಕ್ಕೆ ಅತ್ಯಂತ ಕಳವಳಕಾರಿ ವಿಷಯ. ಈ ವಿಷಯವನ್ನು ಕೆನಡಾ ಸರ್ಕಾರಕ್ಕೆ ಹಲವು ಬಾರಿ ಪ್ರಸ್ತಾಪಿಸಲಾಗಿದೆ. ಭಾರತದ ಕಳವಳಗಳನ್ನು ಪರಿಹರಿಸಲು ಕೆನಡಾ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಭರವಸೆ ವ್ಯಕ್ತಪಡಿಸಿದ್ದಾರೆ.
ಮೊದಲ ಬಾರಿಗೆ ಪ್ರಧಾನಿಯಾದ ನಂತರ ನರೇಂದ್ರ ಮೋದಿ ಅವರು ತಮ್ಮ ಮೊದಲ ವಿದೇಶಿ ಪ್ರವಾಸದಲ್ಲಿ ಭೂತಾನ್‌ಗೆ ತೆರಳಿದ್ದರು. 2019ರಲ್ಲಿ ಅಧಿಕಾರಕ್ಕೆ ಮರಳಿದ ನಂತರ ಪ್ರಧಾನಿ ಮಾಲ್ಡೀವ್ಸ್ ಅನ್ನು ಆಯ್ಕೆ ಮಾಡಿದ್ದರು. (ಏಜೆನ್ಸೀಸ್​​)
ಟೋಲ್​​ ಶುಲ್ಕ ಕೇಳಿದ್ದಕ್ಕೆ ಬುಲ್ಡೋಜರ್​ ಚಾಲಕ ಮಾಡಿದ್ದೇನು ಗೊತ್ತಾ? ಜಾಲತಾಣದಲ್ಲಿ ವೈರಲ್​​ ಆಯ್ತು ಆ ಘಟನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + nine =
Remember me
