ವಿಜಯವಾಡ:ಆಂಧ್ರಪ್ರದೇಶಕ್ಕೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಾಪಸ್ ತೆರಳುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಪ್ಪು ಬಲೂನ್ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀವ್ ರತನ್, ಗನ್ನವರಂ ಪೊಲೀಸ್ ಠಾಣೆಗೆ ಗುರುವಾರ ಶರಣಾಗಿದ್ದಾರೆ.
ತಲೆಮರೆಸಿಕೊಂಡಿದ್ದ ರಾಜೀವ್ ರತನ್​ ಅವರ ಬಂಧನಕ್ಕೆ ಮೂರು ದಿನಗಳಿಂದ ಪೊಲೀಸ್ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಇಂದು ಪಕ್ಷದ ಮುಖಂಡರ ಜತೆ ಠಾಣೆಗೆ ಬಂದ ರಾಜೀವ್ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾರೆ.
ಪ್ರಕರಣದ ಹಿನ್ನೆಲೆ:ಜುಲೈ 4 ರಂದು ಪಶ್ಚಿಮ ಗೋದಾವರಿ ಜಿಲ್ಲೆಗೆ ಪ್ರಧಾನಿ ಭೇಟಿಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಹಲವೆಡೆ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ಸಮೀಪ ಕಪ್ಪು ಬಲೂನ್ ಹಾರಿಸಿ ಪ್ರತಿಭಟನೆ ನಡೆಸಿದ್ದರು.
ಪ್ರಧಾನಿ ಹೆಲಿಕಾಪ್ಟರ್ ಭೇಟಿ ವೇಳೆ ಬಲೂನ್ ಹಾರಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೃಷ್ಣಾ ಜಿಲ್ಲಾ ಪೊಲೀಸರು ಪಿಸಿಸಿ ಪ್ರಧಾನ ಕಾರ್ಯದರ್ಶಿ ಪರಸಾ ರಾಜೀವ್ ರತನ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಆರೋಪಿ ರಾಜೀವ್ ಮತ್ತು ಇತರ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 353, 341, 188 ಮತ್ತು 145 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ನಂತರ ನಾಲ್ವರನ್ನ ಪೊಲೀಸರು ಬಂಧಿಸಿದ್ದರು.
ಮೋದಿ ಹೆಲಿಕಾಪ್ಟರ್‌ ಹೊರಟ ಐದು ನಿಮಿಷಗಳ ನಂತರ ಬಲೂನ್‌ಗಳು ಹಾರಾಡಿದ್ದು, ವಿಮಾನ ನಿಲ್ದಾಣದಿಂದ 4.5 ಕಿಲೋಮೀಟರ್ ದೂರದಲ್ಲಿರುವ ಸೂರಂಪಲ್ಲಿಯಿಂದ ಬಲೂನ್‌ಗಳನ್ನು ಹಾರಿಸಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವೋ “ಮಹಾ” ವಂಚನೆ ಬಯಲು: ಬರೋಬ್ಬರಿ 62,476ಕೋಟಿ ರೂ.ಚೀನಾಗೆ ರವಾನೆ!

ಹತ್ಯೆಯಾದ ಕನ್ಹಯ್ಯ ಲಾಲ್ ಮಕ್ಕಳಿಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಗೆಹ್ಲೋಟ್​ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
