ನವದೆಹಲಿ:ಕರೊನಾ ಸಂಬಂಧಿಸಿದ ಸಮಸ್ಯೆಯಿಂದಾಗಿ ಇಹಲೋಕವನ್ನು ತ್ಯಜಿಸಿದ ಅಥ್ಲೆಟಿಕ್ಸ್ ದಿಗ್ಗಜ ಹಾಗೂ ಫ್ಲೈಯಿಂಗ್​ ಸಿಖ್​ ಎಂದೇ ಖ್ಯಾತಿ ಪಡೆದಿರುವ ಮಿಲ್ಖಾ ಸಿಂಗ್‌ಗೆ 78ನೇ ಮನ್​ ಕೀ ಬಾತ್​ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು.
ಮನ್​ ಕೀ ಬಾತ್​ನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಲಿಂಪಿಕ್ಸ್​ ಬಗ್ಗೆ ಮಾತನಾಡುವಾಗ, ನಾವೇಕೆ ಮಿಲ್ಖಾ ಸಿಂಗ್ ಅವರನ್ನು ನೆನಪಿಸಿಕೊಳ್ಳುವುದಿಲ್ಲ? ಅವರು ಆಸ್ಪತ್ರೆಗೆ ದಾಖಲಾದಾಗ ಅವರೊಂದಿಗೆ ಮಾತನಾಡಲು ನನಗೆ ಅವಕಾಶ ಸಿಕ್ಕಿತು. ಟೋಕಿಯೊ ಒಲಿಂಪಿಕ್ಸ್‌ಗೆ ಹೋಗುವ ಕ್ರೀಡಾಪಟುಗಳನ್ನು ಪ್ರೇರೇಪಿಸುವಂತೆ ನಾನು ಅವರಲ್ಲಿ ವಿನಂತಿಸಿದ್ದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಟೋಕಿಯೋ ಒಲಂಪಿಕ್​ ತೆರಳುತ್ತಿರುವ ಎಲ್ಲರಿಗೂ ಶುಭಕೋರಿದ ಪ್ರಧಾನಿ ಮೋದಿ, ಒಲಂಪಿಕ್​ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್​ಸೈಟ್​ ಅನ್ನು ಆರಂಭಿಸಿರುವುದಾಗಿ ಮಾಹಿತಿ ನೀಡಿದರು. ಅಲ್ಲದೆ, ರೋಡ್​ ಟು ಟೋಕಿಯೋ ಕ್ವಿಜ್ ಆರಂಭಿಸಿರುವುದಾಗಿಯೂ ತಿಳಿಸಿದರು. ಕ್ರೀಡಾ ಸ್ಫೂರ್ತಿಯಿಂದ ಉತ್ತಮ ಆಟಗಾರನಾಗಬಹುದು. ಹಳ್ಳಿಗಳಿಂದ ಅನೇಕ ಆಟಗಾರರು ಒಲಂಪಿಕ್​ ಬರುತ್ತಾರೆ ಎಂದು ಹೇಳಿದರು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪ್ರವೀಣ್ ಜಾಧವ್ ಅತ್ಯುತ್ತಮ ಬಿಲ್ಲುಗಾರ. ಅವರ ಪೋಷಕರು ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ ಮತ್ತು ಈಗ ಜಾಧವ್ ಟೋಕಿಯೊದಲ್ಲಿ ತಮ್ಮ ಮೊದಲ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ ಎಂದರು.
ಟೋಕಿಯೊಗೆ ಹೋಗುವ ಪ್ರತಿಯೊಬ್ಬ ಆಟಗಾರನು ಸಹ ಸ್ವಂತ ಹೋರಾಟ ಮತ್ತು ಅನೇಕ ವರ್ಷಗಳ ಶ್ರಮವನ್ನು ಹೊಂದಿದ್ದಾರೆ. ಅವರು ತಮಗಾಗಿ ಮಾತ್ರವಲ್ಲದೇ ದೇಶಕ್ಕಾಗಿ ಹೋಗುತ್ತಿದ್ದಾರೆ. ಅಂತಹ ಹಲವಾರು ಹೆಸರುಗಳಿವೆ, ಆದರೆ ಮನ್ ಕಿ ಬಾತ್‌ನಲ್ಲಿ ಇಂದು ನಾನು ಕೆಲವರನ್ನು ಮಾತ್ರ ಉಲ್ಲೇಖಿಸಲು ಸಾಧ್ಯವಾಯಿತು ಎಂದರು ತಿಳಿಸಿದರು.
ಇದೇ ವೇಳೆ ಕರೊನಾ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶವಾಸಿಗಳು ಕರೊನಾ ವಿರುದ್ಧ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ನಾವು ಒಟ್ಟಾಗಿ ಅನೇಕ ಅಸಾಧಾರಣ ಮೈಲಿಗಲ್ಲನ್ನು ಸಾಧಿಸಿದ್ದೇವೆ. ಕೆಲವೇ ದಿನಗಳ ಹಿಂದೆ ನಮ್ಮ ದೇಶವು ಅಭೂತಪೂರ್ವ ಸಾಧನೆ ಮಾಡಿದೆ ಎಂದರು.
ಲಸಿಕೆ ವಿಚಾರದಲ್ಲಿ ದಯವಿಟ್ಟು ಭಯವನ್ನು ತೊಡೆದುಹಾಕಿ. ಲಸಿಕೆ ಹಾಕಿಸಿದ ಬಳಿಕ ಕೆಲವೊಮ್ಮೆ ಜನರಿಗೆ ಜ್ವರ ಬರಬಹುದು ಆದರೆ ಅದು ತುಂಬಾ ಸೌಮ್ಯವಾಗಿರುತ್ತದೆ ಮತ್ತು ಕೆಲವೇ ಗಂಟೆಗಳವರೆಗೆ ಇರುತ್ತದೆ. ಲಸಿಕೆಯನ್ನು ತಪ್ಪಿಸುವುದು ತುಂಬಾ ಅಪಾಯಕಾರಿ. ನೀವು ನಿಮ್ಮನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲದೆ ನಿಮ್ಮ ಕುಟುಂಬ ಮತ್ತು ಇಡೀ ಹಳ್ಳಿಯನ್ನೂ ಸಹ ಅಪಾಯಕ್ಕೆ ದೂಡುತ್ತದೆ ಎಂದು ಎಚ್ಚರಿಸಿದರು.
Sign in to your account
Please enter an answer in digits:five × three =
Remember me
