ಲಖನೌ: ಅಯೋಧ್ಯೆಯ ಶ್ರೀರಾಮಜನ್ಮಭೂಮಿ ಸ್ಥಳದಲ್ಲಿ ಶ್ರೀರಾಮಮಂದಿರದ ಭೂಮಿಪೂಜೆ, ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಹನುಮಗಡಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಅವರಿಗೆ ಬೆಳ್ಳಿ ಕಿರೀಟ ಉಡುಗೊರೆಯಾಗಿ ನೀಡಲು ದೇಗುಲದ ಆಡಳಿತ ನಿರ್ಧರಿಸಿದೆ.
ಅಯೋಧ್ಯೆಯ ಹನುಮಗಡಿ ದೇವಾಲಯದ ಮುಖ್ಯ ಅರ್ಚಕ ಶ್ರೀ ಗಡ್ಡಿನ್​ಶೀನ್ ಪ್ರೇಮದಾಸ್​ ಜೀ ಮಹಾರಾಜ್ ಈ ವಿಷಯವನ್ನು ಬಹಿರಂಗಪಡಿಸಿದ್ದು,  ಪ್ರಧಾನಿ ನರೇಂದ್ರ ಮೋದಿಯವರು ಇದೇ ವೇಳೆ 3.5 ಕ್ವಿಂಟಾಲ್ ತೂಕದ ಘಂಟೆಯನ್ನು ಭಾರಿಸುವ ನಿರೀಕ್ಷೆಯಲ್ಲಿದ್ದೇವೆ. ಅದಾಗಿ ಅವರು ರಾಮಜನ್ಮಭೂಮಿ ಸ್ಥಳಕ್ಕೆ ತೆರಳಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಅಯೋಧ್ಯೆಗೆ ಪ್ರಥಮ ಪ್ರಾಶಸ್ತ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆ ಆಗಮಿಸುತ್ತಿರುವ ವಿಷಯವೇ ನಮಗೆ ಹೆಮ್ಮೆಯ ಸಂಗತಿ. ದೇಶವನ್ನು ಅನೇಕ ಪ್ರಧಾನ ಮಂತ್ರಿಗಳು ಮುನ್ನಡೆಸಿದ್ದಾರೆ. ಆದರೆ, ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಅವಕಾಶ ಸಿಕ್ಕಿದ್ದು ಮೋದಿಯವರಿಗೆ ಮಾತ್ರವೇ ಅದು ವಿಶೇಷ ಎಂದು ಪ್ರೇಮದಾಸ್ ಜೀ ಮಹಾರಾಜ್ ಹೇಳಿದ್ದಾರೆ. (ಏಜೆನ್ಸೀಸ್)
ರಾಮಜನ್ಮಭೂಮಿಗೆ ಭೇಟಿ ನೀಡ್ತಿರೋ ಮೊದಲ ಪ್ರಧಾನಿ ನರೇಂದ್ರ ಮೋದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 1 =
Remember me
