ನವದೆಹಲಿ:2019 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣದ ಐದು ರಾಜ್ಯಗಳ 129 ಲೋಕಸಭೆ ಸ್ಥಾನಗಳ ಪೈಕಿ 29 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಈ ಪೈಕಿ 25 ಸ್ಥಾನಗಳು ಕರ್ನಾಟಕದಿಂದ ಬಂದಿವೆ, ಅಲ್ಲದೆ, ಕಳೆದ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ಇನ್ನೂ ಖಾತೆ ತೆರೆಯಲು ಸಾಧ್ಯವಾಗಿಲ್ಲ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದಕ್ಷಿಣದಲ್ಲಿ ವಿಜಯ ಯಾತ್ರೆಗೆ ಮುಂದಾಗಿದ್ದಾರೆ. ದಕ್ಷಿಣದ ಐದು ರಾಜ್ಯಗಳಲ್ಲಿ ಪ್ರಚಾರಕ್ಕಾಗಿ ಸಾಕಷ್ಟು ಸಮಯವನ್ನು ವಿನಿಯೋಗಿಸುವ ಮತ್ತು ಮುಂಬರುವ ಎರಡು ತಿಂಗಳಲ್ಲಿ ಅಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುವ “ಮಿಶನ್​ ಸೌತ್​’ ಗುರಿಯನ್ನು ಪ್ರಧಾನಿ ಹಾಕಿಕೊಂಡಿದ್ದಾರೆ.
ಹೊಸ ವಿಮಾನ ನಿಲ್ದಾಣ ಸೇರಿದಂತೆ 20,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮಂಗಳವಾರ ತಮಿಳುನಾಡಿಗೆ ಭೇಟಿ ನೀಡಿದರು. ಬುಧವಾರ ಕೇರಳದಲ್ಲಿರುವ ಅವರು, ತ್ರಿಶೂರ್‌ನಲ್ಲಿ ಬೃಹತ್ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಅಂದಾಜು ಎರಡು ಲಕ್ಷ ಬಿಜೆಪಿ ಮಹಿಳಾ ಕಾರ್ಯಕರ್ತರು ಇರುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
It is a matter of immense joy that my first public programme of 2024 took place in the great state of Tamil Nadu and that too among our Yuva Shakti.
Here are glimpses from the convocation at the Bharathidasan University in Tiruchirappalli.pic.twitter.com/hUi1JYFuUq
— Narendra Modi (@narendramodi)January 2, 2024

ದಕ್ಷಿಣದ ಐದು ರಾಜ್ಯಗಳಿಂದ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 40-50 ಸ್ಥಾನಗಳನ್ನು ಗಳಿಸುವುದು ನಮ್ಮ ಗುರಿಯಾಗಿದೆ. ಸಿದ್ದರಾಮಯ್ಯ ಸರ್ಕಾರದ ಮೇಲೆ ಜನರು ಶೀಘ್ರ ನಂಬಿಕೆ ಕಳೆದುಕೊಂಡಿರುವುದರಿಂದ ಕರ್ನಾಟಕದಲ್ಲಿ ನಮ್ಮ (25) ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದೇವೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ನಾವು ಮತ ಪ್ರಮಾಣವನ್ನು ಕಳೆದುಕೊಂಡಿಲ್ಲ. 2019ರಲ್ಲಿ ತೆಲಂಗಾಣದಲ್ಲಿ ನಾವು ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ ಈ ಬಾರಿಯೂ ಉತ್ತಮ ಪ್ರದರ್ಶನ ನೀಡಲಿದೆ. ಕೇರಳ ಮತ್ತು ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಕೆಲವು ಸ್ಥಾನಗಳನ್ನು ಗೆಲ್ಲುವ ಭರವಸೆ ನಮಗಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಚುನಾವಣೆ ಪ್ರಚಾರದ ಸಮಯದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಂತಹ ಉನ್ನತ ನಾಯಕರ ರ್ಯಾಲಿಗಳು ‘ದಕ್ಷಿಣದ ಮೇಲೆ ಗಮನ’ವನ್ನು ಹೊಂದಿರುತ್ತವೆ. ಮೋದಿ ಹೆಸರಿನಲ್ಲಿ ಮತಗಳನ್ನು ಕೇಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ ಆಕ್ರಮಣಕಾರಿ ರಾಜಕೀಯ ನಿಲುವಿನ ನಂತರ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿರುವುದರಿಂದ ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ಏಕಾಂಗಿಯಾಗಿ ಹೋರಾಡಲಿದೆ. ಆದರೂ, ಬಿಜೆಪಿ ತನ್ನ ನಿಲುವಿಗೆ ಅಂಟಿಕೊಂಡಿದ್ದು, ಎಐಎಡಿಎಂಕೆಯ ಬೇಡಿಕೆಯ ಮೇರೆಗೆ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯ ಮುಖ್ಯಸ್ಥ ಸ್ಥಾನದಿಂದ ಬದಲಾಯಿಸಿಲ್ಲ. ಕೇರಳದಲ್ಲಿಯೂ ಬಿಜೆಪಿಯು ಎಡಪಕ್ಷಗಳು ಮತ್ತು ಕಾಂಗ್ರೆಸ್ ಎರಡನ್ನೂ ಆಕ್ರಮಣಕಾರಿಯಾಗಿ ಎದುರಿಸುತ್ತಿದೆ. ಅಲ್ಲದೆ, ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಹಾಕಲು ಯೋಜಿಸಿದೆ.
ತೆಲಂಗಾಣದಲ್ಲಿ, ಚುನಾವಣೆಗೆ ಮುನ್ನ ಬಂಡಿ ಸಂಜಯ್ ಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೈಬಿಡುವ ನಿರ್ಧಾರದಿಂದಾಗಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. “ಆದರೆ ಬಿಆರ್‌ಎಸ್ ಪತನದೊಂದಿಗೆ, ಲೋಕಸಭೆ ಚುನಾವಣೆಯು ಈಗ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹೋರಾಟವಾಗಿದೆ” ಎಂದು ಈ ನಾಯಕ ಹೇಳಿದ್ದಾರೆ.

ಮುಂಬೈ ಮಹಿಳೆಗೆ 19 ವರ್ಷಗಳ ನಂತರ ಮಹಾರಾಷ್ಟ್ರ ಸಚಿವರ ಸಂಬಂಧಿ ರೂ 8.41 ಕೋಟಿ ಪಾವತಿ ಮಾಡಿದ್ದೇಕೆ?

“ಸತ್ಯ ಮೇಲುಗೈ ಸಾಧಿಸಿದೆ”: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ತೀರ್ಪು ಸ್ವಾಗತಿಸಿದ ಗೌತಮ್ ಅದಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
