ನವದೆಹಲಿ: ದೇಶದಲ್ಲಿ ಕರೊನಾ ಸೋಂಕು ಪಸರಿಸಿದ ಆರೋಪಕ್ಕೆ ಗುರಿಯಾಗಿರುವ ಮತ್ತು ವೀಸಾ ನಿಯಮ ಉಲ್ಲಂಘನೆಯ ಪ್ರಕರಣ ಎದುರಿಸುತ್ತಿರುವ ತಬ್ಲಿಘಿ ಜಮಾತ್‌ನ 916 ವಿದೇಶಿ ಸದಸ್ಯರ ವಿರುದ್ಧ ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
67 ದೇಶಗಳ ಸುಮಾರು ಒಂದು ಸಾವಿರ ವಿದೇಶಿಯರು ಪ್ರವಾಸಿ ವೀಸಾ ಮೇಲೆ ಭಾರತಕ್ಕೆ ಬಂದಿದ್ದರು. ಆದರೆ 916 ಮಂದಿ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿದ್ದರು. ಹೀಗಾಗಿ ಅವರ ವೀಸಾ ಮತ್ತು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಯನ್ನು ಪೊಲೀಸರು ಮುಗಿಸಿದ್ದು, ಇವರಲ್ಲಿ ಅನೇಕರು ಧಾರ್ಮಿಕ ಸಮ್ಮೇಳನ ಮುಗಿದ ಮೇಲೂ ಮೌಲಾನಾ ಸಾದ್‌ರ ಸೂಚನೆಯಂತೆ ಹಜರತ್ ನಿಜಾಮುದ್ದೀನ ಬಳಿಯ ಮಾರ್ಕಜ್‌ನಲ್ಲಿ ಉಳಿದುಕೊಂಡಿದ್ದರು.
ಇದನ್ನೂ ಓದಿಕರೊನಾ ಹರಡಲು ಕರೆ ನೀಡಿದ್ದ ಟೆಕ್ಕಿಗೆ ಸಿಗಲಿಲ್ಲ ಜಾಮೀನು
ಇದಲ್ಲದೆ, ತಬ್ಲಿಘಿ ಜಮಾತ್‌ನ ಮುಖ್ಯಸ್ಥ ಮೌಲಾನಾ ಸಾದ್‌ರ ಐವರು ಆಪ್ತರ ಪಾಸ್‌ಪೋರ್ಟ್‌ನ್ನು ವಶಪಡಿಸಿಕೊಳ್ಳಲಾಗಿದೆ. ಸಾದ್‌ರ ಆಪ್ತರಾದ ಮುಫ್ತಿ ಶಾಹಜಾದ್, ಜಿಶಾನ್, ಮುರ್ಸಾಲಿನ್ ಸೈಫಿ, ಮೊಹಮ್ಮದ್ ಸಲ್ಮಾನ್ ಮತ್ತು ಯೂನಿಸ್ ದೇಶಬಿಟ್ಟು ಹೋಗದಂತೆ ತಡೆಯಲು ಅವರ ಪಾಸ್‌ಪೋರ್ಟ್‌ಗಳನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ.
ಹಿಟ್ಲರ್​​ಗೆ​ ಸೇರಿದ್ದೆನ್ನಲಾದ ಮೊಸಳೆ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
