
ನವದೆಹಲಿ:ಕೇಂದ್ರವು ಈ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸುತ್ತದೆ, ಇದರಿಂದ 81 ಕೋಟಿ ಭಾರತೀಯರು ಪ್ರಯೋಜನ ಪಡೆಯುತ್ತಾರೆ. ಇದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ. 2024ರ ಜನವರಿ 1ರಿಂದ 5 ವರ್ಷಗಳವರೆಗೆ ಇದನ್ನು ವಿಸ್ತರಿಸುವುದಾಗಿ ನರೇಂದ್ರ ಮೋದಿ ಸರ್ಕಾರ ಬುಧವಾರ ಘೋಷಿಸಿದೆ.ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಪಡಿತರದ ಮೂಲಕ ಈ ಯೋಜನೆಯಡಿ ನೀಡಲಾಗುತ್ತದೆ. ಅಂತ್ಯೋದಯ ಕುಟುಂಬಗಳು ತಿಂಗಳಿಗೆ 35 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಪಡೆಯುತ್ತವೆ, ದೇಶದ ಅಂದಾಜು 81 ಕೋಟಿ ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಾರೆ. ಮುಂದಿನ ಐದು ವರ್ಷಗಳಲ್ಲಿ ಸರ್ಕಾರ ಒಟ್ಟು 11.80 ಲಕ್ಷ ಕೋಟಿ ರೂ.ಗಳನ್ನು ಈ ಯೋಜನೆಗೆ ಖರ್ಚು ಮಾಡಲಿದೆ.
ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ವಿವರಗಳನ್ನು ನೀಡಿದ್ದಾರೆ.
ಕೋವಿಡ್ ಸಾಂಕ್ರಾಮಿಕ ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2020ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ನೀಡಲಾಗುತ್ತದೆ. ಅನೇಕ ಬಾರಿ ವಿಸ್ತರಣೆ ಮಾಡಿದ ನಂತರ ಈ ಯೋಜನೆಯು 2022ರ ಡಿಸೆಂಬರ್​ನಲ್ಲಿ ಕೊನೆಗೊಂಡಿತ್ತು.
#WATCH| Union Minister Anurag Thakur says, "In the last five years, around 13.50 crore Indians rose above the poverty level. This is a big achievement of the Modi Government. Similarly, during the COVID-19 pandemic, the Pradhan Mantri Garib Kalyan Anna Yojana was introduced.…pic.twitter.com/W9lhquhaUT— ANI (@ANI)November 29, 2023
#WATCH| Union Minister Anurag Thakur says, "In the last five years, around 13.50 crore Indians rose above the poverty level. This is a big achievement of the Modi Government. Similarly, during the COVID-19 pandemic, the Pradhan Mantri Garib Kalyan Anna Yojana was introduced.…pic.twitter.com/W9lhquhaUT
15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಯೋಜನೆಗೂ ಕೇಂದ್ರ ಸಂಪುಟ ಅನುಮೋದನೆ ನೀಡಿದೆ, 2024-25ರ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ 1,261 ಕೋಟಿ ರೂ.ಗಳನ್ನು ಇದಕ್ಕಾಗಿ ವ್ಯಯಿಸಲಾಗುತ್ತಿದೆ.
“ಈ ಯೋಜನೆಯು 2024-25 ರಿಂದ 2025-2026 ರ ಅವಧಿಯಲ್ಲಿ 15,000 ಆಯ್ದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೃಷಿ ಉದ್ದೇಶಕ್ಕಾಗಿ ರೈತರಿಗೆ ಬಾಡಿಗೆ ಸೇವೆಗಳನ್ನು ಒದಗಿಸಲು ಡ್ರೋನ್‌ಗಳನ್ನು ಒದಗಿಸುವ ಉದ್ದೇಶ ಹೊಂದಿದೆ” ಎಂದು ಸಚಿವ ಠಾಕೂರ್ ತಿಳಿಸಿದರು.
ಕೆಟಿಆರ್ ಮಾಮಾ… ಹೈದರಾಬಾದ್‌ಗೆ ಡಿಸ್ನಿಲ್ಯಾಂಡ್ ತರಬಹುದೇ? ತೆಲಂಗಾಣ ಸಚಿವರಿಗೆ ಬಾಲಕಿಯ ಮುದ್ದಾದ ಬೇಡಿಕೆ
ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ ಶಾ ಘೋಷಣೆ
4 ಟ್ರಿಲಿಯನ್ ಡಾಲರ್ ಕ್ಲಬ್‌ ಸೇರಿದ ಭಾರತೀಯ ಷೇರು ಮಾರುಕಟ್ಟೆ; ಬಂಡವಾಳದಲ್ಲಿ ದಾಖಲೆ ಬರೆದ ಬಿಎಸ್​ಇ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − two =
Remember me
