ನವದೆಹಲಿ:ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್‌ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಅವರ ಪಾರ್ಥೀವ ಶರೀರವನ್ನು ಚಿತಾಗಾರಕ್ಕೆ ಒಯ್ಯಲಾಗುತ್ತಿದೆ.
#WATCHDelhi: The mortal remains of former President#PranabMukherjeebrought to Lodhi Crematorium.
He had tested positive for#COVID19and had undergone surgery for a brain clot at Army (R&R) Hospital on August 10, where he passed away yesterday.pic.twitter.com/24h4hHxZ2L
— ANI (@ANI)September 1, 2020

ಈ ನಡುವೆ ಕೇಂದ್ರ ಸಚಿವ ಸಂಪುಟವು ಇದೀಗ ಎರಡು ನಿಮಿಷ ಮೌನ ಆಚರಿಸಿ ಪ್ರಣಬ್‌ ಮುಖರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಇವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ನಡೆದಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ 10, ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಇದಾಗಲೇ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರಾಹುಲ್‌ ಗಾಂಧಿ, ಮನಮೋಹನ ಸಿಂಗ್‌, ಅರವಿಂದ ಕೇಜ್ರಿವಾಲ್‌ ಅವರು ಇದೀಗ ಸ್ಥಳಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು.
ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರು ಮೆದುಳು ಶಸ್ತ್ರಚಿಕಿತ್ಸೆ ನಂತರವೂ ಚೇತರಿಸಿಕೊಂಡಿರಲಿಲ್ಲ. ಆರೋಗ್ಯ ಸಮಸ್ಯೆಗಳು ಉಂಟಾಗಿದ್ದರಿಂದ ಕೋಮಾಗೆ ಜಾರಿದ್ದ ಅವರು ನಿನ್ನೆ ಸಂಜೆ ನಿಧನರಾಗಿದ್ದಾರೆ.
ಭಾರತ ರತ್ನ ಪ್ರಣಬ್ ಮುಖರ್ಜಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ರು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − six =
Remember me
