ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಶಿಕ್ಷಣ ಸಚಿವಾಲಯ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ. ಈ ಸಂಬಂಧ ಅಧಿಸೂಚನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅಂಕಿತ ಹಾಕಿದ್ದಾರೆ. ಡಾ.ಕೆ.ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಸಿದ್ಧಪಡಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಈ ಮರುನಾಮಕರಣದ ಸಲಹೆಯನ್ನು ನೀಡಲಾಗಿತ್ತು. ಅದೀಗ ಅನುಷ್ಠಾನಗೊಂಡಂತಾಗಿದೆ.
ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಜುಲೈ 29ರ ಸಭೆಯಲ್ಲಿ ಅನುಮೋದಿಸಿತ್ತು. ಸಚಿವಾಲಯದ ವೆಬ್​ಸೈಟ್ ಮತ್ತು ಶಿಕ್ಷಣ ಸಚಿವರ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಈ ಬದಲಾವಣೆ ಆಗಸ್ಟ್ 4ರಂದೇ ಆಗಿತ್ತು. ಸರ್ಕಾರಿ ಯಂತ್ರಕ್ಕೆ ಸಂಬಂಧಿಸಿದ ಬದಲಾವಣೆಗಳಿಗೆ ಕ್ಯಾಬಿನೆಟ್ ತೀರ್ಮಾನವಾದರೂ ಅದಕ್ಕೆ ರಾಷ್ಟ್ರಪತಿಯವರ ಅಂಕಿತ ಬೀಳಬೇಕಾದುದು ಅತ್ಯಂತ ಅಗತ್ಯವಾದುದಾಗಿದೆ. ಇದರಂತೆ, ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಆಗಸ್ಟ್ 14ರಂದು ಈ ಮರುನಾಮಕರಣಕ್ಕೆ ಸಮ್ಮತಿ ಸೂಚಿಸಿದರು. ಈ ಸಂಬಂಧಿತ ಗಝೆಟ್​ ನೋಟಿಫಿಕೇಶನ್​ ಸೋಮವಾರ ಪ್ರಕಟವಾಗಿದೆ.
ಇದನ್ನೂ ಓದಿ:ಡಿಜೆಹಳ್ಳಿ ಗಲಭೆ: ಪಾಷಾಗೆ ಐಸಿಸ್‌ ನಂಟು? ಕಾರ್ಪೋರೇಟರ್‌ಗಳ ಮೇಲೂ ಪೊಲೀಸರ ಕಣ್ಣು- ನೋಟಿಸ್‌ ಜಾರಿ
ಇಸ್ರೋದ ಮಾಜಿ ಚೇರ್ಮನ್​ ಕೆ.ಕಸ್ತೂರಿ ರಂಗನ್ ನೇತೃತ್ವದ ಸಮಿತಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಹೊಣೆಗಾರಿಕೆಯನ್ನು ಸರ್ಕಾರ ನೀಡಿತ್ತು. ಅದು ನೀಡಿದ ಮೊದಲ ಸಲಹೆಯೇ ಸಚಿವಾಲಯದ ಮರುನಾಮಕರಣವಾಗಿತ್ತು. 2018ರಲ್ಲಿ ಇಂಥದ್ದೇ ಚಿಂತನೆಯನ್ನು ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ನ ಚೇರ್​ಮನ್​ ಆಗಿದ್ದ ರಾಮ್ ಬಹಾದುರ್ ರಾಯ್​ ಸರ್ಕಾರದ ಮುಂದೆ ಪ್ರಸ್ತಾಪಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. (ಏಜೆನ್ಸೀಸ್)
ಗೋವಾ ರಾಜ್ಯಪಾಲರು ಮೇಘಾಲಯಕ್ಕೆ, ಮಹಾ ರಾಜ್ಯಪಾಲರಿಗೆ ಗೋವಾ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
