ಉತ್ತರಪ್ರದೇಶ:ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.
ಇನ್ಮುಂದೆ ರಾಮ ಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಅರ್ಚಕರೆಲ್ಲರೂ ಒಂದೇ ಬಗೆಯ ಧಿರಿಸಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಡ್ರೆಸ್​ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ಮುಱಮದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್​ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಪ್ರಸ್ತುತ ಭಕ್ತರು ಅನುಸರಿಸುತ್ತಿರುವ ನಿರ್ಬಂಧವು  ಅರ್ಚಕರಿಗೂ ಅನ್ವಯವಾಗಲಿದೆ. 26 ಮಂದಿ ಅರ್ಚಕರು ವಿವಿಧ ಪಾಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ರಚಿಸಿರುವ ಧಾರ್ಮಿಕ ಸಮಿತಿಯು ಹೊಸದಾಗಿ ತರಬೇತಿ ಪಡೆದ 21 ಅರ್ಚಕರನ್ನು ಸೇರಿಸಲು ನಿರ್ಧರಿಸಿದೆ.
ಅರ್ಚಕರಿಗೆ ಗುರುತಿನ ಚೀಟಿಯನ್ನೂ ಟ್ರಸ್ಟ್​ ನೀಡಿದೆ. ಅವರ ನೇಮಕಾತಿ ಪತ್ರಗಳನ್ನು ಅವರ ಆರು ತಿಂಗಳ ತರಬೇತಿ ಪ್ರಮಾಣಪತ್ರಗಳೊಂದಿಗೆ ಜುಲೈ 3 ಅಥವಾ 5ರಂದು ಹಸ್ತಾಂತರಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕ್ರಮಗಳು ಅರ್ಚಕರ ನಡುವೆ ಏಕರೂಪತೆಯನ್ನು ಕಾಯ್ದುಕೊಳ್ಳುವ ಮತ್ತು ಆವರಣದಲ್ಲಿ ಇತರರಿಂದ ಭಿನ್ನವಾಗಿಸುವ ಪ್ರಯತ್ನದ ಭಾಗವಾಗಿದೆ.
1 ವರ್ಷದ ಮಗುವಿಗೆ ಕೈದಿ ಬಟ್ಟೆ ಹಾಕಿಸಿದ್ದ ದಚ್ಚು ಅಭಿಮಾನಿಗೆ ನೋಟಿಸ್‌ ನೀಡಲು ಮುಂದಾದ ಮಕ್ಕಳ ಆಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
