ಶಹಜಹಾನ್‌ಪುರ(ಉತ್ತರ ಪ್ರದೇಶ):ಉತ್ತರ ಪ್ರದೇಶದ ಷಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿಕ್ಷಕನೊಬ್ಬ ಕನಿಷ್ಠ 18 ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸ್ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಆಟಿಕೆ ಮಾರಾಟಗಾರನಿಂದ ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಮೂವರು ಆರೋಪಿಗಳನ್ನು ಕಂಪ್ಯೂಟರ್ ಶಿಕ್ಷಕ ಮೊಹಮ್ಮದ್ ಅಲಿ, ಸಹಾಯಕ ಶಿಕ್ಷಕಿ ಸಾಜಿಯಾ ಮತ್ತು ಶಾಲೆಯ ಪ್ರಾಂಶುಪಾಲ ಅನಿಲ್ ಪಾಠಕ್ ಎಂದು ಗುರುತಿಸಲಾಗಿದೆ. ” ಶಹಜಹಾನ್‌ಪುರದ ತಿಲ್ದಾರ್ ಪೊಲೀಸ್‌ ಠಾಣೆಯಲ್ಲಿ ಬಂಧಿಸಲಾಗಿದೆ.
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸುಮಾರು 18 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು. ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಶಹಜಹಾನ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್‌ ತಿಳಿಸಿದ್ದಾರೆ. ಕಾನೂನು ಕ್ರಮ ಕೈಗೊಂಡು ಮಕ್ಕಳ ಕಲ್ಯಾಣ ಸಮಿತಿಗೆ ತಿಳಿಸಲಾಗಿದೆ ಎಂದರು.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯದ ಆರೋಪ; ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುತ್ತಾ ಬೆಂಗಳೂರಿಗೆ ಬಂದ ಅಸ್ಸಾಂ ಪೊಲೀಸರು!
“ಪ್ರಕರಣವು ಶಹಜಹಾನ್‌ಪುರ ಜಿಲ್ಲೆಯ ತಿಲ್ದಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಶಾಲೆಗೆ ಸಂಬಂಧಿಸಿದೆ. ಮೊಹಮ್ಮದ್ ಅಲಿ, ಕಂಪ್ಯೂಟರ್ ಬೋಧಕ ಶಾಲೆಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದರು. ಅವರಿಗೆ ಪ್ರಾಂಶುಪಾಲ ಅನಿಲ್ ಪಾಠಕ್ ಮತ್ತು ಮತ್ತೋರ್ವ ಶಿಕ್ಷಕಿ ಸಾಜಿಯಾ ಬೆಂಬಲ ನೀಡಿದ್ದಾರೆ’ ಎಂದು ತಿಲ್ದಾರ್ ಸರ್ಕಲ್ ಅಧಿಕಾರಿ ಪ್ರಿಯಾಂಕ್ ಹೇಳಿದ್ದಾರೆ. ಗ್ರಾಮದ ಮುಖ್ಯಸ್ಥ ಪ್ರಧಾನ್ ಲಲತಾ ಪ್ರಸಾದ್ ಅವರು ಎಲ್ಲಾ ಆರೋಪಿಗಳ ವಿರುದ್ಧ ತಿಲ್ದಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು .
ತನ್ನ ಕಂಪ್ಯೂಟರ್ ಶಿಕ್ಷಕರು ತನ್ನನ್ನು ಮತ್ತು ಇತರ ವಿದ್ಯಾರ್ಥಿನಿಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು ಎಂದು ಬಾಲಕಿಯೊಬ್ಬಳು ತನ್ನ ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ನಂತರ ಈ ಬಾಲಕಿಯರ ಪೋಷಕರು ಶಾಲೆಯ ಮೇಲೆ ದಾಳಿ ನಡೆಸಿ ಶಾಲೆಯ ಶೌಚಾಲಯದಿಂದ ಬಳಸಿದ ಕಾಂಡೋಮ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಉದ್ದೇಶಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಹಾಯಕ ಶಿಕ್ಷಕಿ ಸಹಿತ ಪ್ರಾಂಶುಪಾಲರನ್ನು ಅಮಾನತುಗೊಳಿಸಿದ್ದಾರೆ.
‘ಕಂಪ್ಯೂಟರ್ ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆಗೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಶೀಘ್ರ ಪೂರ್ಣಗೊಳಿಸಲಾಗುವುದು. ಸದ್ಯ ಪ್ರಾಂಶುಪಾಲರು ಹಾಗೂ ಸಹಾಯಕ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ’ ಎಂದು ಮೂಲ ಶಿಕ್ಷ ಣಾಧಿಕಾರಿ (ಬಿಎಸ್‌) ಕುಮಾರ್ ಗೌರವ್ ತಿಳಿಸಿದ್ದಾರೆ.
ಇದನ್ನೂ ಓದಿ:ಸಹಾಯದ ನೆಪದಲ್ಲಿ ಗರ್ಭಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 10 ಲಕ್ಷ ರೂ. ವಂಚನೆ: ಯುವಕ ಅರೆಸ್ಟ್​
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಕುಮಾರ್ ಗೌರವ್ ತಿಳಿಸಿದ್ದಾರೆ. ಏತನ್ಮಧ್ಯೆ, ಉತ್ತರ ಪ್ರದೇಶದ ಸಚಿವ ಬಲದೇವ್‌ ಸಿಂಗ್ ಔಲಾಖ್ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಬಹುತೇಕ ದಲಿತ ಸಮುದಾಯದವರಾದ ಬಾಲಕಿಯರ ಮೇಲೆ ಹಲ್ಲೆ ನಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಾವು ಎಲ್ಲ ಜಾತಿ, ಸಮುದಾಯಗಳನ್ನು ಗೌರವಿಸುತ್ತೇವೆ, ದಲಿತರ ಬಗ್ಗೆ ಅಲ್ಲ, ಹೆಣ್ಣುಮಕ್ಕಳಿಗೆ ಸಂಬಂಧಿಸಿದ್ದು, ಆರೋಪಿಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು” ಎಂದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
