ನವದೆಹಲಿ:ನೀಟ್​ ಪಿಜಿ 2024ರ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಿದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿಯನ್ನು ಟೀಕಿಸಿದ್ದಾರೆ. ‘ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಹೋರಾಡಲು ದೇಶದ ಸಮರ್ಥ ಯುವಕರು ತಮ್ಮ ಅತ್ಯಮೂಲ್ಯ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಇದನ್ನು ಅಸಹಾಯಕರಾಗಿ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡಸಿದರು.
ಇದನ್ನು ಓದಿ:ಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನಿಸಿದ ಉಗ್ರರನ್ನು ಹೊಡೆದುರುಳಿಸಿದ ಸೇನೆ
ನೀಟ್​​ ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ, ನೀಟ್​ ಪಿಜಿ ಪೇಪರ್​​​ ರದ್ದು, ಯುಜಿಸಿ ನೆಟ್​​ ಪರೀಕ್ಷೆ ರದ್ದು ಮತ್ತು ನಂತರ ಸಿಎಸ್​​ಐಆರ್​ ನೆಟ್​​ ರದ್ದಾಯಿತು. ಪ್ರಸ್ತುತ ದೇಶದ ಕೆಲವು ದೊಡ್ಡ ಪರೀಕ್ಷೆಗಳ ಸ್ಥಿತಿ ಇದಾಗಿದೆ ಎಂದು ಪ್ರಿಯಾಂಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಇಡೀ ಶಿಕ್ಷಣವನ್ನು ಮಾಫಿಯಾ ಮತ್ತು ಭ್ರಷ್ಟರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿದ್ದಾರೆ. ದೇಶದ ಶಿಕ್ಷಣ ಮತ್ತು ಮಕ್ಕಳ ಭವಿಷ್ಯವನ್ನು ದುರಾಸೆಯ ಮತ್ತು ಅಸಮರ್ಥರ ಕೈಗೆ ನೀಡುವ ರಾಜಕೀಯ ಮೊಂಡುತನ ಮತ್ತು ದುರಹಂಕಾರವು ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದತಿ, ಕ್ಯಾಂಪಸ್‌ಗಳಿಂದ ಶಿಕ್ಷಣ ರದ್ದತಿ ಮತ್ತು ರಾಜಕೀಯ ಗೂಂಡಾಗಿರಿ ನಮ್ಮ ಶಿಕ್ಷಣ ವ್ಯವಸ್ಥೆಯ ಲಕ್ಷಣವಾಗಿದೆ. ಪರೀಕ್ಷೆಯನ್ನೂ ನ್ಯಾಯಯುತವಾಗಿ ನಡೆಸಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಅದಷ್ಟೇ ಅಲ್ಲದೆ, ಇಂದು ಬಿಜೆಪಿ ಸರ್ಕಾರ ಯುವಜನರ ಭವಿಷ್ಯಕ್ಕೆ ದೊಡ್ಡ ಅಡ್ಡಿಯಾಗಿದೆ. ದೇಶದ ಸಮರ್ಥ ಯುವಕರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಹೋರಾಡಲು ತಮ್ಮ ಅಮೂಲ್ಯವಾದ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ. ಅದನ್ನು ಮೋದಿ ಅವರು ಅಸಹಾಯಕರಾಗಿ ನೋಡುತ್ತಿದ್ದಾರೆ ಎಂದರು. ನೀಟ್​ ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡುವ ನಿರ್ಧಾರವು ಮುನ್ನೆಚ್ಚರಿಕೆ ಕ್ರಮವಾಗಿದೆ. ಪರೀಕ್ಷೆ ಪ್ರಕ್ರಿಯೆಗಳ ದೃಢತೆಯನ್ನು ಸಂಪೂರ್ಣ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.(ಏಜೆನ್ಸೀಸ್​​)
ನೀಟ್ ವಿವಾದದ ನಡುವೆ ಶಿಕ್ಷಣ ಇಲಾಖೆಯಿಂದ ಉನ್ನತ ಮಟ್ಟದ ಸಮಿತಿ ರಚನೆ; ಈ ಕಮಿಟಿ ಕಾರ್ಯ ಏನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twenty =
Remember me
