ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣ (ಪಿಎಂಎಲ್‌ಎ) ಪ್ರಕರಣದಲ್ಲಿ ಇಡಿ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಹೆಸರಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಮೂಲಕ ಹರಿಯಾಣದಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ಇಡಿ ತನ್ನ ಚಾರ್ಜ್ ಶೀಟ್‌ನಲ್ಲಿ ತಿಳಿಸಿದೆ.
2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸಿ, ಅದೇ ಭೂಮಿಯನ್ನು ಫೆಬ್ರವರಿ, 2010 ರಲ್ಲಿ ಅವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಇಡಿ, ಪ್ರಿಯಾಂಕಾ ಗಾಂಧಿಯ ಹೆಸರು ಉಲ್ಲೇಖಿಸಿದೆ.
ಎನ್‌ಆರ್‌ಐ ಉದ್ಯಮಿ ಸಿಸಿ ಥಂಪಿ ಮತ್ತು ಬ್ರಿಟಿಷ್ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮೊದಲ ಬಾರಿಗೆ ಹೆಸರಿಸಲಾಗಿದೆ. ರಾಬರ್ಟ್ ವಾದ್ರಾ ಮತ್ತು ಥಂಪಿ ಅವರಲ್ಲದೆ, ಪ್ರಿಯಾಂಕಾ ಗಾಂಧಿ ಕೂಡ ಫರಿದಾಬಾದ್‌ನಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಡಿ ಪ್ರಕಾರ, ಫರಿದಾಬಾದ್‌ನ ಅಮಿಪುರ್ ಗ್ರಾಮದಲ್ಲಿ ಪಹ್ವಾ ಅವರಿಂದ ಭೂಮಿಯನ್ನು ಖರೀದಿಸಲಾಗಿದೆ. ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರಿಂದ ಅಮಿಪುರ್ ಗ್ರಾಮದಲ್ಲಿ 40.08 ಎಕರೆಯ ಮೂರು ತುಂಡು ಭೂಮಿಯನ್ನು ಖರೀದಿಸಿ ಅದನ್ನು ಡಿಸೆಂಬರ್, 2010 ರಲ್ಲಿ ಅವರಿಗೇ ಮಾರಾಟ ಮಾಡಿದ್ದಾರೆ.  ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಪಹ್ವಾ ಅವರು ಎನ್‌ಆರ್‌ಐ ಉದ್ಯಮಿ ಸಿಸಿ ಥಂಪಿಗೆ ಭೂಮಿಯನ್ನು ಮಾರಾಟ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಹಿಂದಿನ ಚಾರ್ಜ್ ಶೀಟ್‌ಗಳಲ್ಲಿ ವಾದ್ರಾ ಅವರ ಹೆಸರನ್ನು ತಂಪಿಯ ನಿಕಟವರ್ತಿ ಎಂದು ಇಡಿ ಉಲ್ಲೇಖಿಸಿದ್ದರೂ, ಪ್ರಿಯಾಂಕಾ ಹೆಸರನ್ನು ಉಲ್ಲೇಖಿಸಿರುವುದು ಇದೇ ಮೊದಲು. ಪರಾರಿಯಾಗಿರುವ ಶಸ್ತ್ರಾಸ್ತ್ರ ಡೀಲರ್ ಸಂಜಯ್ ಭಂಡಾರಿ ಅವರು ಅಕ್ರಮ ಹಣ ವರ್ಗಾವಣೆ, ವಿದೇಶಿ ವಿನಿಮಯ ಉಲ್ಲಂಘನೆ, ಕಪ್ಪುಹಣ ಕಾನೂನು ಮತ್ತು ಅಧಿಕೃತ ರಹಸ್ಯ ಕಾಯಿದೆಯಲ್ಲಿ ವಿವಿಧ ಸಂಸ್ಥೆಗಳಿಂದ ತನಿಖೆ ನಡೆಸುತ್ತಿದ್ದಾರೆ.
ರಾಬರ್ಟ್ ವಾದ್ರಾ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿಗಳೆಂದು ಹೆಸರಿಸದಿದ್ದರೂ, ತಂಪಿ ಮತ್ತು ವಾದ್ರಾ ನಡುವೆ ಸಂಪರ್ಕವನ್ನು ಸ್ಥಾಪಿಸಲು ಭೂ ವ್ಯವಹಾರಗಳನ್ನು ಇಡಿ ಉಲ್ಲೇಖಿಸಿದೆ. ವಾದ್ರಾ ಮತ್ತು ಥಂಪಿ ನಡುವಿನ ಇತರ ಹಣಕಾಸು ವಹಿವಾಟಿನ ವಿವರಗಳನ್ನೂ ಇಡಿ ನೀಡಿದೆ.
ಥಂಪಿ ಅವರು ವಾದ್ರಾ ಅವರಿಂದ ಲ್ಯಾಂಡ್ ಕ್ರೂಸರ್ ಕಾರನ್ನು ಖರೀದಿಸಿದ್ದರು, ಇದಕ್ಕಾಗಿ ಅವರ ಅನಿವಾಸಿ ಬಾಹ್ಯ ಖಾತೆಯಿಂದ ಚೆಕ್ ಮೂಲಕ ಪಾವತಿಗಳನ್ನು ಮಾಡಲಾಗಿದೆ ಎಂದು ಇಡಿ ಹೇಳಿದೆ.
ವಿದೇಶದಲ್ಲಿ ಯುವತಿ ಜತೆ ಸಿಕ್ಕಿಬಿದ್ದ ಖ್ಯಾತ ನಟ..ಕ್ಯಾಮೆರಾ ನೋಡಿ ಮುಖ ಮುಚ್ಚಿಕೊಂಡು ಓಡಿದ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 3 =
Remember me
