ಚೆನ್ನೈ:ಐಸಿಐಸಿಐ ಬ್ಯಾಂಕ್​ ನಿರ್ಮಾತೃ ನಾರಾಯಣನ್ ವಘುಲ್ ಅವರು ಶನಿವಾರ (ಮೇ 18) ತಮ್ಮ 88 ನೇ ವಯಸ್ಸಿನಲ್ಲಿ ಚೆನ್ನೈನಲ್ಲಿ ನಿಧನರಾದರು.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದ ಅವರು ಸ್ಥಿತಿ ಗಂಭೀರವಾಗಿತ್ತು. ಪ್ರಜ್ಞಾಹೀನರಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು 44ನೇ ವಯಸ್ಸಿನಲ್ಲಿ ಸರ್ಕಾರಿ ಚಾಲಿತ ಬ್ಯಾಂಕ್ ಆಫ್ ಇಂಡಿಯಾದ ಕಿರಿಯ ಅಧ್ಯಕ್ಷರಾದರು. ರಾಜೀವ್ ಗಾಂಧಿ ಆಡಳಿತದ ಅವಧಿಯಲ್ಲಿ ಅವರನ್ನು ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗುವಂತೆ ಕೋರಲಾಯಿತು.
ವಘುಲ್ ಅವರು 80 ರ ದಶಕದ ಮಧ್ಯಭಾಗದಲ್ಲಿ ಆಗಿನ ಇಂಡಸ್ಟ್ರಿಯಲ್ ಕ್ರೆಡಿಟ್ ಮತ್ತು ಇನ್ವೆಸ್ಟ್‌ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಐಸಿಐಸಿಐ- ಈಗ ಐಸಿಐಸಿಐ ಬ್ಯಾಂಕ್) ಎಂಡಿ ಮತ್ತು ಸಿಒಒ ಆಗಿ ಅಧಿಕಾರ ವಹಿಸಿಕೊಂಡು, ಈ ಹಣಕಾಸು ಸಂಸ್ಥೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ನಂತರ ಅವರ ಉಸ್ತುವಾರಿಯಲ್ಲಿಯೇ ಇದನ್ನು ಐಸಿಐಸಿಐ ಬ್ಯಾಂಕ್ ಆಗಿ ಪರಿವರ್ತಿಸಲಾಯಿತು. ವಘುಲ್ ಅವರು ಐಸಿಐಸಿಐ ಬ್ಯಾಂಕ್‌ನಲ್ಲಿ ಲಿಂಗ ತಾರತಮ್ಯ ತೋರದೆ, ಅನೇಕ ಮಹಿಳೆಯರನ್ನು ಪ್ರೋತ್ಸಾಹಿಸಿ ಬೆಳೆಸಿದ್ದು ವಿಶೇಷವಾಗಿದೆ.
ವಘುಲ್ ಅವರು 2010ರಲ್ಲಿ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದರು. 2023 ರಲ್ಲಿ, ವಘುಲ್ ಅವರು ‘ರಿಫ್ಲೆಕ್ಷನ್ಸ್’ ಎಂಬ ತಮ್ಮ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದರು, ಇದು ಭಾರತದ ಹಣಕಾಸು ವಲಯದಲ್ಲಿ ಹಲವಾರು ದಶಕಗಳ ಕಾಲ ಅವರ ಅನುಭವಗಳ ದಾಖಲೆಯಾಗಿದೆ.
ಹೊಸ ಸರ್ಕಾರದಲ್ಲಿ ಎಫ್‌ಡಿಐ ನಿಯಮಗಳು ಇನ್ನಷ್ಟು ಸಡಿಲ: ಡಿಪಿಐಐಟಿ ಕಾರ್ಯದರ್ಶಿ ಇಂಗಿತ

ವಿದೇಶಿ ಹೂಡಿಕೆದಾರರಿಂದ ಮತ್ತೆ ಖರೀದಿ ಜೋರು: ವಿಶೇಷ ವಹಿವಾಟಿನಲ್ಲೂ ಷೇರುಪೇಟೆ ನೆಗೆತ

ಸೋಮವಾರದಂದು ಷೇರು ಮಾರುಕಟ್ಟೆಯಲ್ಲಿ ನಡೆಯುವುದಿಲ್ಲ ವಹಿವಾಟು: ಮೇ 20ರಂದು ರಜೆ ಘೋಷಿಸಿರುವುದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
