ಶ್ರೀನಗರ:ಜಮ್ಮು ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಯೋಧರ ಪರ ಕಂಬಿನಿ ಮಿಡಿದಿರುವ ಸ್ಥಳೀಯರು ಉಗ್ರರ ಅಟ್ಟಹಾಸವನ್ನು ಖಂಡಿಸಿ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸರ್ಕಾರದ ಪ್ರತಿಕ್ರಿಯೆಗೆ ಆಗ್ರಹಿಸಿ ಆಪರೇಷನ್ ಆಲ್​ ಔಟ್ ಎನ್ನುವ ಅಭಿಯಾನವನ್ನು ಆರಂಭಿಸಿದ್ದಾರೆ.
ಇದನ್ನೂ ಓದಿ:ವೃದ್ಧೆ ಸಾವಿಗೆ ಸಂತಾಪ ಸೂಚಿಸಿದ ಕೋತಿ; ಮನಕಲುಕುವ ವಿಡಿಯೋ ವೈರಲ್…!
ರಾಷ್ಟ್ರೀಯ ಬಜರಂಗದಳದ ಮುಖ್ಯಸ್ಥ ರಾಕೇಶ್ ಕುಮಾರ್ ನೇತೃತ್ವದಲ್ಲಿ, ಕಾರ್ಯಕರ್ತರು ಯೋಧರ ಹತ್ಯೆ ಪಾಕಿಸ್ತಾನಕ್ಕೆ ನೀಡುತ್ತಿರುವ ಬೆಂಬಲದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಕೃತಿಗಳನ್ನು ಸುಟ್ಟು ಪಾಕಿಸ್ತಾನವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಈ ರೀತಿಯ ಹೇಡಿಗಳ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸೇನಾ ಸಿಬ್ಬಂದಿ ಮತ್ತು ನಾಗರಿಕರನ್ನು ಗುರಿಯಾಗಿಸುತ್ತಿರುವ ವಿದೇಶಿ ಕೂಲಿ ಕಾರ್ಮಿಕರನ್ನು ಹೊರಹಾಕಬೇಕು. ಸರ್ಕಾರ ‘ಆಪರೇಷನ್ ಆಲ್ ಔಟ್’ ಕಾರ್ಯಾಚರಣೆಯನ್ನು ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.
ದೋಡಾ ಜಿಲ್ಲೆಯ ದೇಸಾ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಥಾಪಾ, ನಾಯಕ್ ಡಿ ರಾಜೇಶ್, ಸಿಪಾಯಿ ಬಿಜೇಂದ್ರ ಮತ್ತು ಸಿಪಾಯಿ ಅಜಯ್ ಹುತಾತ್ಮರಾಗಿದ್ದರು.
ಉತ್ತರಪ್ರದೇಶ: ಗ್ಯಾಂಗ್​ಸ್ಟರ್ ಅತಿಕ್ ಅಹ್ಮದ್​​ನ 50 ಕೋಟಿ ಮೌಲ್ಯದ ಆಸ್ತಿ ಸ್ವಾಧೀನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
