ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಅಲ್ಲಿನ ಕಾಂಗ್ರೆಸ್ ಶಾಸಕ ಜಾನ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜಾನ್ ಕುಮಾರ್ ಅವರು ಸ್ಪೀಕರ್ ವಿ ಪಿ ಶೀವಕೋಲುಂತು ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಮೂಲಕ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಅಲ್ಪಮತಕ್ಕೆ ಕುಸಿದಿದೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಮಾಡುವಂತೆ ಸ್ಪೀಕರ್​ಗೆ ಬೇಡಿಕೆ ಸಲ್ಲಿಸಿವೆ.
33 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಡಿಎಂಕೆ ಮೈತ್ರಿಯ 17 ಶಾಸಕರು ಇದ್ದರೆ, (ನಾಮನಿರ್ದೇಶಿತರೂ ಸೇರಿದಂತೆ) ವಿರೋಧ ಪಕ್ಷದಲ್ಲಿರುವ ಬಿಜೆಪಿ, ಎಐಎಡಿಎಂಕೆ ಹಾಗೂ ಪಕ್ಷೇತರರ ಸಂಖ್ಯೆ 16 ಇದೆ. ಜಾನ್ ಕುಮಾರ್ ಅವರ ರಾಜೀನಾಮೆ ಸಲ್ಲಿಸುವ ಮೂಲಕ ಕಾಂಗ್ರೆಸ್​ಗೆ ಸಂಕಷ್ಟಕ್ಕೆ ಒಳಗಾಗಿದೆ.
ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ಆಪ್ತರಾಗಿದ್ದ ಜಾನ್ ಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಬರುವ ಮೇ ನಲ್ಲಿ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. (ಏಜೇನ್ಸಿಸ್)
ಕಾಲುವೆಗೆ ಬಿದ್ದ ಬಸ್ : 38 ಮಂದಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
