ನವದೆಹಲಿ:ಒಡಿಶಾದ ಪುರಿಯಲ್ಲಿ ಆಯೋಜನೆಗೊಳ್ಳುವ ವಿಶ್ವಪ್ರಸಿದ್ಧ ಜಗನ್ನಾಥ ಪುರಿ ರಥಯಾತ್ರೆ ಆರಂಭವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆ ನಿಷೇಧಿಸಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ, ರಥಯಾತ್ರೆ ಸಾಂಗೋಪಾಂಗವಾಗಿ ಸಾಗುತ್ತಿದೆ.
ಸಾಮಾನ್ಯವಾಗಿ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು, ದೇಶ-ವಿದೇಶದ ಪ್ರವಾಸಿಗರು ಪ್ರತಿ ವರ್ಷ ರಥಯಾತ್ರೆಗೆ ಸಾಕ್ಷಿಯಾಗುತ್ತಿದ್ದರು. ಆದರೆ, ಈ ಬಾರಿ ಕೋವಿಡ್​ ಕರ್ಫ್ಯೂ ಹಿನ್ನೆಲೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಹಲವು ನಿರ್ಬಂಧಗಳನ್ನು ವಿಧಿಸಿ ಜಗನ್ನಾಥಯಾತ್ರೆಯ ವಿಧಿವಿಧಾನಗಳನ್ನು ಪೂರೈಸಲು ಸುಪ್ರೀಂಕೋರ್ಟ್​ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ರಥಯಾತ್ರೆ ಆರಂಭವಾಗಿದೆ.
ಸುಪ್ರೀಂಕೋರ್ಟ್​ ಸೂಚನೆಯ ಮೇರೆಗೆ ಒಡಿಶಾ ಸರ್ಕಾರ ಪುರಿಯಲ್ಲಿ 41 ಗಂಟೆಗಳ ಕೋವಿಡ್​ ಕರ್ಫ್ಯೂ ಜಾರಿಗೊಳಿಸಿದೆ. ಅಲ್ಲದೆ, ರಥಯಾತ್ರೆಯಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸುವ 700 ಪುರೋಹಿತರನ್ನು ಕೋವಿಡ್​ ಪರೀಕ್ಷೆಗೆ ಒಳಪಡಿಸಿ, ಯಾವುದೇ ಸೋಂಕು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದೆ. ಆನಂತರದಲ್ಲಷ್ಟೇ ಅವರಿಗೆ ಜಗನ್ನಾಥ, ಬಲಭದ್ರ ಮತ್ತು ಸುಭದ್ರರ ತ್ರಿವಳಿ ರಥಗಳನ್ನು ಎಳೆಯುವ ಕೈಂಕರ್ಯದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಒಬ್ಬ ವ್ಯಕ್ತಿಗೆ ಕರೊನಾ ಇದೆಯೆಂದು ಆತನ ನೆರೆಹೊರೆಯವರಿಗೆ ತಿಳಿಸಿದ ಡಾಕ್ಟರ್ ಗತಿ ಏನಾಯ್ತು ನೋಡಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
