ಇಟಾನಗರ:ಜೈಲು ಸಿಬ್ಬಂದಿಗೆ ಖಾರದ ಪುಡಿ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಈ ವೇಳೆ ಸಿಬ್ಬಂದಿಯ ಮೇಲೆ ಹಲ್ಲೆ ಸಹ ಮಾಡಿದ್ದು, ಸುಮಾರು 5 ರಕ್ಷಣಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಘಟನೆ ಈಸ್ಟ್​ ಸಯಾಂಗ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಸೋಮವಾರ ವರದಿಯಾಗಿದೆ. ಜೈಲಿಂನಿಂದ ಎಸ್ಕೇಪ್​ ಆಗಲು 7 ಕೈದಿಗಳು ಮೊದಲೇ ಸಂಚು ರೂಪಿಸಿದ್ದರು. ಕೈದಿಗಳನ್ನು ಅಭಿಜಿತ್​ ಗೊಗಯ್​, ತಾರೋ ಹಮಾಮ್​, ಕಲೋಮ್​ ಅಪಾಂಗ್​, ತಲುಮ್​ ಪ್ಯಾನ್​ಯಿಂಗ್​. ಸುಬಾಶ್​ ಮೊಂಡಲ್​, ರಾಜಾ ತಾಯೆಂಗ್​ ಮತ್ತು ಡನಿ ಗಾಮಲಿನಾ ಎಂದು ಗುರುತಿಸಲಾಗಿದೆ. ತಮ್ಮ ಸೆಲ್​ನಲ್ಲಿದ್ದ ಸೇರಿಸಿಕೊಂಡಿದ್ದ ಉಪ್ಪು ಮತ್ತು ಖಾರದ ಪುಡಿಯನ್ನು ಎರಚಿ ಹಲ್ಲೆ ಮಾರಿ ಜೈಲಿನಿಂದ ಎಸ್ಕೇಪ್​ ಆಗಿದ್ದಾರೆ.
ಈ ಘಟನೆ ಭಾನುವಾರ ರಾತ್ರಿ 6.30ರ ಸುಮಾರಿಗೆ ನಡೆದಿದೆ. ಊಟಕ್ಕೆಂದು ಸೆಲ್​ಗಳನ್ನು ತೆರೆಯಲಾಗಿತ್ತು. ಎಸ್ಕೇಪ್​ ಆಗಲು ಸಂಚು ರೂಪಿಸಿದ್ದ ಏಳು ಮಂದಿಯು ಕೂಡ ಒಂದೇ ಕಡೆ ಸೇರಿದ್ದರು. ತಮ್ಮ ಯೋಜನೆಯಂತೆಯೇ ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಐವರು ಜೈಲು ಸಿಬ್ಬಂದಿಗೆ ಗಾಯಗಳಾಗಿವೆ. ಐವರಲ್ಲಿ ಒಬ್ಬರ ತಲೆಗೆ ಪೆಟ್ಟು ಬಿದ್ದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸೆಲ್​ನ ಭಾರದ ಲಾಕ್​ನಿಂದ ತಲೆಗೆ ಹೊಡೆದಿರುವ ಸಾಧ್ಯತೆ ಇದೆ. ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್​ ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಚುಖು ಅಪಾ ತಿಳಿಸಿದ್ದಾರೆ. ಕೈದಿಗಳು ಹಿರಿಯ ಅಧಿಕಾರಿಗಳ ಮೊಬೈಲ್​ ಫೋನ್​ ಅನ್ನು ಸಹ ದೋಚಿದ್ದಾರೆಂದು ತಿಳಿದುಬಂದಿದೆ. ಇದೀಗ ಎಸ್ಕೇಪ್​ ಆಗಿರುವ ಕೈದಿಗಳನ್ನು ಮತ್ತೆ ಸೆರೆಹಿಡಿಯಲು ವಿಶೇಷ ಪೊಲೀಸ್​ ತಂಡವನ್ನು ರಚಿಸಿ, ಕಾರ್ಯಾಚರಣೆಗೆ ಇಳಿಯಲಾಗಿದೆ.
ಸಾಂಕ್ರಾಮಿಕ ರೋಗದಿಂದಾಗಿ ಮಧ್ಯಾಹ್ನ 3 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರುವುದರಿಂದ ತಪ್ಪಿಸಿಕೊಳ್ಳುವ ಕೈದಿಗಳು ಈ ಪರಿಸ್ಥಿತಿಯಲ್ಲಿ ಹೆಚ್ಚು ದೂರ ಹೋಗುವುದು ಕಷ್ಟ ಎಂದು ಪಾಸಿಘಾಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ತಪಾಂಗ್ ಟಾಟಕ್ ಹೇಳಿದ್ದಾರೆ.(ಏಜೆನ್ಸೀಸ್​)
ಲೋಕೋಪಕಾರದ ಕೆಲಸಕ್ಕಾಗಿ ರಾಗಿಣಿ ದ್ವಿವೇದಿಗೆ ಲೆಜೆಂಡ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

‘ಅಂಬರೀಶ್ ಫ್ಯಾಮಿಲಿಗಾಗಿ ಪ್ರಾಣ ಕೊಡೋಕೂ ಸಿದ್ಧ, ನನ್ನ ಹೆದರಿಸೋಕೆ ನಿಮ್ಮಿಂದಾಗಲ್ಲ’

ವಜ್ರಮುನಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 7 =
Remember me
