ಸಿದ್ದಿಪೇಟೆ:ಜೂನ್​ 29 ರಂದು 80 ವರ್ಷದ ನಾರಾಯಣ ಎಂಬುವರು ತೆಲಂಗಾಣದ ಸಿದ್ದಿಪೇಟೆ ಸಮೀಪದ ಗ್ರಾಮವೊಂದರಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಸಿದ್ದಿಪೇಟೆಗೆ ಹಿಂದಿರುಗುವಾಗ ದಾರಿತಪ್ಪಿದ ನಾರಾಯಣ ಜಮೀನಿನಲ್ಲಿದ್ದ ಪಾಳುಬಾವಿಗೆ ಆಕಸ್ಮಿಕವಾಗಿ ಬಿದ್ದು ಮೂರು ದಿನಗಳ ಬಳಿಕ ರಕ್ಷಣೆ ಒಳಗಾದ ಘಟನೆ ನಡೆದಿದೆ.
ಬಾವಿಯಲ್ಲಿ ಬಿದ್ದಿದ್ದ ನಾರಾಯಣ ಮೂರು ದಿನಗಳ ಕಾಲ ನೆರವಿಗಾಗಿ ಕೂಗಾಡಿ, ಕಣ್ಣೀರಾಕಿದರು ಯಾರೊಬ್ಬರಿಗೂ ಅವರ ಸುಳಿವು ಸಿಗಲಿಲ್ಲ. ಮೂರು ದಿನಗಳ ಕಾಲವೂ ಊಟ ಇಲ್ಲದೆ ಹಿರಿಯ ಜೀವ ಸಾಕಷ್ಟು ನರಳಾಡಿದೆ. ಅವರ ನರಳಾಟ ನೋಡಿ ದೇವರಿಗೂ ಮನಸ್ಸು ಕರಗಿತೇನೋ… ಜುಲೈ ಒಂದರಂದು ಅಂದರೆ ಘಟನೆ ನಡೆದ ಮೂರು ದಿನಗಳ ಬಳಿಕ ಪಾಳು ಬಾವಿಯ ಹತ್ತಿರ ಕೆಲಸ ಮಾಡುತ್ತಿದ್ದ ರೈತನಿಗೆ ನಾರಾಯಣ ಅಳುವ ಶಬ್ದ ಕೇಳಿದೆ. ತಕ್ಷಣ ಹೋಗಿ ನೋಡಿದ ರೈತ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಿರಿಯ ಜೀವವನ್ನು ರಕ್ಷಿಸಿದ್ದಾರೆ.
ಮೂರು ದಿನಗಳ ಕಾಲ ಊಟವಿಲ್ಲದೆ, ಬಾವಿಯ ಕೇವಲ ಒಂದು ಭಾಗದಲ್ಲಿದ್ದ ನೀರನ್ನು ಕುಡಿದುಕೊಂಡು ನಾರಾಯಣ ಬದುಕಿದ್ದರು. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿ ಹಿರಿಯ ಜೀವವನ್ನು ರಕ್ಷಿಸಿದ್ದಾರೆ. ತುಂಬಾ ನಿತ್ರಾಣರಾಗಿದ್ದ ನಾರಾಯಣರ ನಡುವಿಗೆ ಹಗ್ಗ ಕಟ್ಟಿ ಮೇಲಕ್ಕೆ ಎಳೆಯಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಅದೃಷ್ಟವಶಾತ್​ ಹಿರಿಯ ಜೀವಕ್ಕೆ ಯಾವುದೇ ಗಾಯಗಳಾಗಿಲ್ಲ. ಆರೋಗ್ಯ ಸ್ಥಿರವಾಗಿದೆ. ಇದಕ್ಕೂ ಮೊದಲು ನಾರಾಯಣ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ನಾಪತ್ತೆ ಪ್ರಕರಣವನ್ನು ದಾಖಲಿಸಲಾಗಿತ್ತು. ನಾರಾಯಣ ರಕ್ಷಣೆ ಮಾಡಿದ್ದಕ್ಕೆ ಅವರ ಕುಟುಂಬ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.(ಏಜೆನ್ಸೀಸ್​)
ಯೂಟ್ಯೂಬ್​ ನೋಡಿ ನಕಲಿ ನೋಟು ಪ್ರಿಂಟ್​: ಆರೋಪಿ ಗಳಿಸಿದ ಹಣದ ಮೊತ್ತ ಕೇಳಿ ಪೊಲೀಸರೇ ಶಾಕ್​!

ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?

ಅತ್ತೆ ಮನೆ ಬಿಟ್ಟುಬಂದಿದ್ದಕ್ಕೆ ಯುವತಿಯ ಕೂದಲು ಹಿಡಿದೆಳೆದು ಮರಕ್ಕೆ ಕಟ್ಟಿ ಥಳಿಸಿದ ತಂದೆ, ಸೋದರಸಂಬಂಧಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + six =
Remember me
