ಲಖನೌ:ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ.
ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು ಬುಧವಾರ ಗ್ರಾಮಕ್ಕೆ ಬಂದಿದ್ದಾಗ ಇಡೀ ಗ್ರಾಮಸ್ಥರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?: ಒಂದು ಗುಂಪಿನ ಗ್ರಾಮಸ್ಥರು ಶಾಸಕ ಸೈನಿ ಕಾರನ್ನು ಹಿಂಬಾಲಿಸಿ, ಕಾರಿನಿಂದ ಕೆಳಗೆ ಇಳಿಯುವಂತೆ ಕೂಗಾಡಿದ್ದಾರೆ. ಅಲ್ಲದೆ, ಶಾಸಕರ ವಿರುದ್ಧ ಘೋಷಣೆ ಕೂಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಂದಹಾಗೆ ಕಳೆದ ಒಂದು ವರ್ಷದ ಪ್ರತಿಭಟನೆಯ ನಂತರ ಸರ್ಕಾರವು ರದ್ದುಗೊಳಿಸಿದ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಅನೇಕರು ಅಸಮಾಧಾನವನ್ನು ಹೊಂದಿದ್ದಾರೆ.
ಶಾಸಕ ವಿಕ್ರಮ್​ ಸೈನಿ ವಿವಾದಾತ್ಮಕ ಹೇಳಿಕೆಯಿಂದ ಹಿಂದೊಮ್ಮೆ ಕುಖ್ಯಾತಿ ಪಡೆದಿದ್ದರು. ಭಾರತ ಸುರಕ್ಷಿತವಲ್ಲ ಎಂದು ಹೇಳುವವರಿಗೆ 2019ರಲ್ಲಿ ಬಾಂಬ್​ ಬೆದರಿಕೆ ಹಾಕಿದ್ದರು. ನಮ್ಮ ದೇಶವನ್ನು ಹಿಂದುಸ್ಥಾನ್​ ಎಂದು ಕರೆಯುತ್ತಾರೆ. ಇದು ಹಿಂದುಗಳಿಗೆ ಮಾತ್ರ ಸ್ವಂತ. ಗೋವುಗಳನ್ನು ಕೊಲ್ಲುವವರ ಕಾಲುಗಳನ್ನು ಕತ್ತರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಅಂದಹಾಗೆ ಉತ್ತರ ಪ್ರದೇಶದ ವಿಧಾನಸಭಾ ಚನಾವಣೆಯು ಫೆ. 10ರಂದು ಆರಂಭವಾಗಲಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್​ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.(ಏಜೆನ್ಸೀಸ್​)
ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!

ಕರೊನಾದಿಂದ ಬಳಲುತ್ತಿದ್ದ ಕಿರಾತಕ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ರಾಜ್ ನಿಧನ

ನಾನು ನಿಮ್ಮ ಫ್ಯಾನ್​ ಅಂದ್ಕೊಂಡು ಬಂದ ಮಹಿಳೆಗೆ ಖ್ಯಾತ ಯೂಟ್ಯೂಬರ್​ ಕೊಟ್ಟಿದ್ದು ಬಿಗ್​ ಶಾಕ್​!

ಕೆಲವೇ ತಿಂಗಳ ಹಿಂದೆ ನಿಕ್ಕಿ ಗಲ್ರಾನಿ ಮನೆಯಲ್ಲಿ ಕೆಲ್ಸಕ್ಕೆ ಸೇರಿದ್ದ ಯುವಕನಿಂದ ನೀಚ ಕೃತ್ಯ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 9 =
Remember me
