ಲಖನೌ:ವ್ಯಕ್ತಿಯೊಬ್ಬರು ಕಳಪೆ ರಸ್ತೆಯ ಬಗ್ಗೆ ಕ್ಯಾಮೆರಾ ಮುಂದೆ ನಿಂತು ಮಾತನಾಡುತ್ತಿರುವಾಗಲೇ ಅವರ ಹಿಂಬದಿಯಲ್ಲಿದ್ದ ರಸ್ತೆಯಲ್ಲಿ ಆಟೋ ರಿಕ್ಷಾವೊಂದು ರಸ್ತೆಗುಂಡಿಯಿಂದಾಗಿ ಪಲ್ಟಿ ಹೊಡೆದ ಘಟನೆ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿಯ ಆರೋಪವನ್ನು ಈ ಘಟನೆಯು ಆ ಕ್ಷಣವೇ ಸಾಬೀತು ಮಾಡಿತು.
ಮಾಧ್ಯಮ ಸಂದರ್ಶನದ ಸಮಯದಲ್ಲಿ ನೇರ ದೃಶ್ಯಾವಳಿಯಲ್ಲಿ ಆಟೋ ರಿಕ್ಷಾವೊಂದು ನೀರು ತುಂಬಿದ ರಸ್ತೆ ಗುಂಡಿಯಿಂದಾಗಿ ಮಗುಚಿ ಬಿದ್ದ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇದಕ್ಕಿಂತ ಸಾಕ್ಷಿ ಬೇರೇನೂ ಬೇಕು ಎಂದು ನೆಟ್ಟಿಗರು ವಿಡಿಯೋ ನೋಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ನಿವಾಸಿಯೊಬ್ಬರು ರಸ್ತೆಗಳ ದುಸ್ಥಿತಿಯ ಬಗ್ಗೆ ವಿವರಣೆ ನೀಡುವಾಗಲೇ ಆಟೋ ಪಲ್ಟಿ ಹೊಡೆದಿದ್ದು, ಅಲ್ಲಿನ ರಸ್ತೆಗಳ ಕರಾಳ ಪರಿಸ್ಥಿತಿಗೆ ಘಟನೆ ಕನ್ನಡಿ ಹಿಡಿದಂತಿತ್ತು. ರಸ್ತೆಗಳು ಸಂಪೂರ್ಣ ಹಾಳಾಗಿದ್ದರು, ಇದುವರೆಗೂ ಯಾವೊಬ್ಬ ಅಧಿಕಾರಿಗಳು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿನಿತ್ಯ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಸಂಚಾರ ಮಾಡಬೇಕಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
The onlookers immediately came to the rescue and took the injured to safety.pic.twitter.com/J8sg1TsNck
— Piyush Rai (@Benarasiyaa)September 14, 2022

ಕಳೆದ ತಿಂಗಳು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಬಿಡುಗಡೆ ಮಾಡಿದ ಅಧಿಕೃತ ಮಾಹಿತಿಯ ಪ್ರಕಾರ, 2018 ಮತ್ತು 2020ರ ನಡುವೆ 5,626 ಜನರ ಸಾವಿಗೆ ರಸ್ತೆ ಗುಂಡಿಗಳಿಂದ ಉಂಟಾದ ಅಪಘಾತಗಳು ಕಾರಣ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ಬಿಗ್​ಬಾಸ್​ ಮನೆಯಿಂದ ಹೊರಬಂದಿರುವ ನಂದಿನಿ 5 ವಾರದಲ್ಲಿ ಗಳಿಸಿದ ಹಣ ಇಷ್ಟೊಂದಾ?

ಬುರ್ಖಾ ತೆಗೆಯುತ್ತಿದ್ದಂತೆಯೇ ಮೂರ್ಛೆ ಹೋಗೋ ಬೆಂಗಳೂರಿನ ಚಿನ್ನದಂಗಡಿವರು! ಬ್ಲ್ಯಾಕ್​ ಮ್ಯಾಜಿಕ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ರಷ್ಯಾದ ಜತೆಗಿನ ಯುದ್ಧದ ನಡುವೆಯೇ ಮತ್ತೊಂದು ಆಘಾತ: ಯೂಕ್ರೇನ್​ ಅಧ್ಯಕ್ಷ ವೊಲೊದಿಮಿರ್ ಕಾರು ಅಪಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + nine =
Remember me
