ನವದೆಹಲಿ:ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಆಮ್​ ಆದ್ಮಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹರ್ಭಜನ್​ ಸಿಂಗ್​ ಸಮಾಜಮುಖಿ ಚಿಂತನೆಯುಳ್ಳ ಮಹತ್ವದ ನಿರ್ಧಾರವೊಂದನ್ನು ಘೋಷಣೆ ಮಾಡಿದ್ದಾರೆ.
ತಮ್ಮ ರಾಜ್ಯಸಭಾ ಸ್ಥಾನದಿಂದ ಬರುವ ಸಂಬಳವನ್ನು ರೈತರ ಮಕ್ಕಳ ಕಲ್ಯಾಣ ಮತ್ತು ಶಿಕ್ಷಣಕ್ಕಾಗಿ ಕೊಡುಗೆ ನೀಡಲು ನಿರ್ಧರಿಸಿದ್ದಾರೆ.
ಟ್ವೀಟ್​ ಮೂಲಕ ತಿಳಿಸಿರುವ ಅವರು ರಾಜ್ಯಸಭಾ ಸದಸ್ಯನಾಗಿ ನಾನು ನನ್ನ ಸಂಬಳವನ್ನು ರೈತರ ಮಕ್ಕಳ ಕಲ್ಯಾಣ ಮತ್ತು ಶಿಕ್ಷಣಕ್ಕೆ ನೀಡಲು ಬಯಸಿದ್ದೇನೆ. ದೇಶದ ಒಳಿತಿಗಾಗಿ ನಾನು ಈ ನಿರ್ಧಾರ ಮಾಡಿದ್ದು, ದೇಶಕ್ಕಾಗಿ ಏನೇನು ಮಾಡಲು ಸಾಧ್ಯವೋ ಅದೆಲ್ಲವನ್ನು ನಾನು ಮಾಡುತ್ತೇನೆ. ಜೈ ಹಿಂದ್​ ಎಂದಿದ್ದಾರೆ.
As a Rajya Sabha member, I want to contribute my RS salary to the daughters of farmers for their education & welfare. I've joined to contribute to the betterment of our nation and will do everything I can. Jai Hind 🇮🇳🇮🇳
— Harbhajan Turbanator (@harbhajan_singh)April 16, 2022

ಆಮ್​ ಆದ್ಮಿ ಪಕ್ಷ ಇತ್ತೀಚೆಗೆ ಪಂಜಾಬ್​ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ಹಿಂದಿನ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಮಣಿಸಿ ಮೊದಲ ಬಾರಿಗೆ ಪಂಜಾಬ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎಎಪಿ ಸರ್ಕಾರ ರಚಿಸಿದ ಬೆನ್ನಲ್ಲೇ ಹರ್ಭಜನ್​ ಸಿಂಗ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವಿರೋಧವಾಗಿ ರಾಜ್ಯಸಭೆಗೂ ಆಯ್ಕೆಯಾಗಿದ್ದಾರೆ. ಹರ್ಭಜನ್​ ಅವರು ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. (ಏಜೆನ್ಸೀಸ್​)
ಹಸ್ತಮೈಥುನದಿಂದ ಶ್ವಾಸಕೋಸದ ಪೊರೆ ಹರಿತ! 20ರ ಯುವಕನ ಎಕ್ಸ್​ರೇ ವರದಿಯಲ್ಲಿತ್ತು ಭಯಾನಕ ಅಂಶ

KGF-2 ಕನ್ನಡದ ಹೆಮ್ಮೆಯಲ್ಲ ಎನ್ನುತ್ತಲೇ ದಂಡುಪಾಳ್ಯ ಚಿತ್ರದ ಭಯಾನಕ ಉದಾಹರಣೆ ಕೊಟ್ಟ ಭಾಸ್ಕರ್​ ರಾವ್!​

ಹುಬ್ಬಳ್ಳಿ ಗಲಭೆ ಪ್ರಕರಣ: ಏ.20ರವರೆಗೆ ನಗರದಾದ್ಯಂತ 144 ಸೆಕ್ಷನ್​​ ಜಾರಿ, ವಾಣಿಜ್ಯ ನಗರದ ಪರಿಸ್ಥಿತಿ ಉದ್ವಿಗ್ನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + thirteen =
Remember me
