ನವದೆಹಲಿ:ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ 97ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸೇರಿದಂತೆ ಪ್ರಮುಖ ಗಣ್ಯರು ವಾಜಪೇಯಿ ಅವರಿಗೆ ಶನಿವಾರ (ಡಿ.25) ಗೌರವ ನಮನ ಸಲ್ಲಿಸಿದರು.
Delhi | President Ram Nath Kovind and Prime Minister Narendra Modi pay floral tribute at ‘Sadaiv Atal’ on former PM Atal Bihari Vajpayee's birth anniversary
Source: DD Newspic.twitter.com/lMRroPtF8t
— ANI (@ANI)December 25, 2021

ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಲಾಗಿರುವ ಸದೈವ್​ ಅಟಲ್​ ಸ್ಮಾರಕಕ್ಕೆ ತೆರಳಿದ ಗಣ್ಯರು ವಾಜಪೇಯಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಗೃಹ ಸಚಿವ ಅಮಿತ್​ ಷಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮತ್ತು ಪಿಯೂಷ್​ ಗೋಯೆಲ್ ಹಾಗೂ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಉಪಸ್ಥಿತರಿದ್ದರು.
Lok Sabha Speaker Om Birla and Union Ministers Amit Shah, Rajnath Singh, and Piyush Goyal pay floral tribute at ‘Sadaiv Atal’ on former PM Atal Bihari Vajpayee's birth anniversarypic.twitter.com/q01ydzfuL6
— ANI (@ANI)December 25, 2021

ಇದಕ್ಕೂ ಮುನ್ನ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಇಂದು ಅಟಲ್ ಜೀ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕಾಗಿ ಅವರು ನೀಡಿದ ಶ್ರೀಮಂತ ಸೇವೆಯಿಂದ ನಾವಿಂದು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸಲು ವಾಜಪೇಯಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಅಭಿವೃದ್ಧಿಯ ಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ವಾಜಪೇಯಿ ಅವರನ್ನು ಸ್ಮರಿಸಿದ್ದಾರೆ.
आदरणीय अटल जी को उनकी जयंती पर कोटि-कोटि नमन।
Remembering Atal Ji on his Jayanti. We are inspired by his rich service to the nation. He devoted his life towards making India strong and developed.
His development initiatives positively impacted millions of Indians.
— Narendra Modi (@narendramodi)December 25, 2021

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಅವರು 2018 ಆಗಸ್ಟ್​ 16ರಂದು ದೆಹಲಿಯಲ್ಲಿ ಕೊನೆಯುಸಿರೆಳೆದರು. ಸಕಲ ಗೌರವಗಳೊಂದಿಗೆ ವಾಜಪೇಯಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಅಲ್ಲದೆ, ದೇಶದ ಪ್ರಮುಖ ನದಿಗಳಲ್ಲಿ ವಾಜಪೇಯಿ ಅವರ ಚಿತಾಭಸ್ಮವನ್ನು ಬಿಡಲಾಯಿತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twelve =
Remember me
