ತಿರುವನಂತಪುರಂ:ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿ ಕೊನೆಗೂ ಬಾಲಕಿ ಮತ್ತು ಆಕೆಯ ತಂದೆಯ ಬಳಿ ಹೈಕೋರ್ಟ್​ನಲ್ಲಿ ಕ್ಷಮೆಯಾಚಿಸಿದ್ದಾರೆ.
ಮಹಿಳಾ ಪೋಲೀಸ್​ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯವು ಡಿಸೆಂಬರ್ 15 ರಂದು ಪರಿಗಣಿಸಲಿದೆ. ಮಗುವಿನ ಮಾನಸಿಕ ಆಘಾತವನ್ನು ಸರಿದೂಗಿಸುವ ಕ್ರಮದ ಬಗ್ಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ಸರ್ಕಾರವನ್ನು ಹೈಕೋರ್ಟ್ ಕೇಳಿದೆ. ಬಾಲಕಿ ಮತ್ತು ಆಕೆಯ ತಂದೆ ಪರಿಹಾರ ಕೋರಿರುವುದರಿಂದ ಸರ್ಕಾರದ ಪ್ರತಿಕ್ರಿಯೆ ಈ ಪ್ರಕರಣದಲ್ಲಿ ಪ್ರಮುಖವಾಗಿದೆ. ಇದರ ಜತೆಗೆ ಬಾಲಕಿಗೆ ಕೌನ್ಸೆಲಿಂಗ್ ನೀಡಿದ ವೈದ್ಯರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ನ್ಯಾಯಾಲಯ ಹೇಳಿದೆ.
ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೇರಳದ ಮಕ್ಕಳ ಹಕ್ಕುಗಳ ರಕ್ಷಣೆಯ ರಾಜ್ಯ ಆಯೋಗವು ಮಹಿಳಾ ಅಧಿಕಾರಿಯ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಆದೇಶ ಹೊರಡಿಸಿತ್ತು. ಅಲ್ಲದೆ, ಮಕ್ಕಳ ಜತೆ ಹೇಗೆ ನಡೆದುಕೊಳ್ಳಬೇಕೆಂದು ಪೊಲೀಸ್​ ಅಧಿಕಾರಿಗಳಿಗೆ ತರಬೇತಿ ನೀಡುವಂತೆಯೂ ಆಯೋಗ ಆದೇಶಿಸಿತ್ತು. ಎಂಟು ವರ್ಷದ ಬಾಲಕಿ ಜತೆ ಮಹಿಳಾ ಅಧಿಕಾರಿ ನಡೆದುಕೊಂಡ ರೀತಿಯು ಬಾಲಕಿಯ ಮನಸ್ಸಿನ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಈಗಾಗಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಕ್ರಮ ತೃಪ್ತಿಕರವಲ್ಲ. ಒಳ್ಳೆಯ ಜಾಗಕ್ಕೆ ಅವರನ್ನು ವರ್ಗಾಯಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲೇಬೇಕೆಂದು ಆಯೋಗ ಒತ್ತಾಯಿಸಿದೆ.
ಕೋರ್ಟ್​ ತರಾಟೆಇದಕ್ಕೂ ಮುನ್ನ ಮಹಿಳಾ ಅಧಿಕಾರಿಯನ್ನು ಕೇರಳ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಕೋರ್ಟ್​ ಮೆಟ್ಟಿಲೇರಿದ್ದ ಬಾಲಕಿ 50 ಲಕ್ಷ ರೂ. ಪರಿಹಾರ ಕೊಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಳು. ಹಿರಿಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಕೂಡ ಮಹಿಳಾ ಪೊಲೀಸ್​ ಮೇಲೆ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಬಾಗಿಲಿಗೆ ಬಂದಿದ್ದೇವೆ. ಸಾರ್ವಜನಿಕರ ಎದುರು ಅವಮಾನಿಸಿದ ಆಘಾತದಿಂದ ಖಿನ್ನತೆಗೆ ಜಾರಿ ಆಪ್ತ ಸಮಾಲೋಚನೆಯನ್ನು ಪಡೆದಿದ್ದೇನೆ. ಈಗಲೂ ಮಹಿಳಾ ಅಧಿಕಾರಿಯ ಚುಚ್ಚು ಮಾತುಗಳು ತೀವ್ರ ನೋವುಂಟು ಮಾಡುತ್ತಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಬಾಲಕಿ ಉಲ್ಲೇಖಿಸಿದ್ದಳು. ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ತಪ್ಪಿತಸ್ಥ ಮಹಿಳಾ ಪೊಲೀಸ್ ಅಧಿಕಾರಿಯ ವಿರುದ್ಧ ತೆಗೆದುಕೊಂಡ ಕ್ರಮವನ್ನು ತಿಳಿಸುವಂತೆ ಪೊಲೀಸ್​ ಇಲಾಖೆಗೆ ಕೋರಿತು ಮತ್ತು ಇದನ್ನು ‘ಸಣ್ಣ’ ಘಟನೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತ್ತು.
ಘಟನೆಯ ಹಿನ್ನೆಲೆ ಏನು?ಆಗಸ್ಟ್​ 27ರಂದು ನಡೆದ ಘಟನೆ ಇದಾಗಿದೆ. 38 ವರ್ಷದ ಜಯಚಂದ್ರನ್, ತನ್ನ ಮಗಳೊಂದಿಗೆ ಇಸ್ರೋ ಘಟಕಕ್ಕೆ ಉಪಕರಣಗಳನ್ನು ಸಾಗಿಸುವ ಬೃಹತ್ ಟ್ರೈಲರ್‌ನ ಚಲನೆಯನ್ನು ವೀಕ್ಷಿಸಲು ಇಲ್ಲಿನ ಅಟ್ಟಿಂಗಲ್ ಬಳಿಯ ಹೊರವಲಯದಲ್ಲಿರುವ ಮುಖ್ಯ ರಸ್ತೆಗೆ ಹೋಗಿದ್ದರು. ಈ ವೇಳೆ ಕೇರಳ ಪೊಲೀಸ್​ ಇಲಾಖೆಯ ಪಿಂಕ್ ಪೊಲೀಸ್​ ಘಟಕದ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ ಅವರು​ ತಮ್ಮ ಮೊಬೈಲ್​ ಕಳೆದುಹೋಗಿದೆ ಜಯಚಂದ್ರನ್​ ಅವರ ತಪಾಸಣೆ ನಡೆಸಿದರು. ಮೊಬೈಲ್​ ಕಳೆದು ಹೋಗುವ ಮುನ್ನ ರೆಜಿತಾ ಅವರಿದ್ದ ಗಸ್ತುವಾಹನ ಪಕ್ಕದಲ್ಲೇ ಜಯಚಂದ್ರನ್​ ಇದ್ದಿದ್ದರಿಂದ ಅವರ ಮೇಲೆ ಅನುಮಾನ ಮೂಡಿತ್ತು. ಮೊಬೈಲ್​ ಕದ್ದಿರುವುದು ಇವರೇ ಎಂದು ಭಾವಿಸಿದ ರೆಜಿತಾ, ಸಾರ್ವಜನಿಕರ ಎದುರಲ್ಲೇ ಬಾಲಕಿ ಮತ್ತು ಆಕೆಯ ತಂದೆಗೆ ಕೆಟ್ಟ ಪದಗಳಿಂದ ಅವಮಾನಿಸಿದರು. ಹತ್ತಿರದ ಪೊಲೀಸ್​ ಠಾಣೆಗೆ ಕರೆದೊಯ್ಯುವುದಾಗಿ ಬೆದರಿಕೆ ಹಾಕಿದರು. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದರು. ಇದಾದ ಬಳಿಕ ರೆಜಿತಾ ಅವರ ಮೊಬೈಲ್​ ಪೊಲೀಸ್​ ವಾಹನದಲ್ಲೇ ಪತ್ತೆಯಾಯಿತು. ಇದಿಷ್ಟು ಘಟನೆಯನ್ನು ದಾರಿಹೋಕರೊಬ್ಬರು ವಿಡಿಯೋ ರೆಕಾರ್ಡ್​ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್​ ಸಹ ಆಗಿದೆ.
ಇದಾದ ಬಳಿಕ ತಮಗಾದ ಅವಮಾನಕ್ಕೆ ನ್ಯಾಯ ಕೇಳಬೇಕೆಂದು ಆಗಸ್ಟ್​ 31ರಂದು ಪೊಲೀಸ್​ ಮುಖ್ಯಸ್ಥ ಅನಿಲ್​ ಕಾಂತ್​ ಬಳಿ ತೆರಳಿ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಜಯಚಂದ್ರನ್​ ದೂರು ನೀಡಿದ್ದಾರೆ. ಸಾರ್ವಜನಿಕವಾಗಿ ನನ್ನ ಮಗಳನ್ನು ಅವಮಾನಿಸಿದ್ದರಿಂದ ಅವಳ ಆಘಾತದಿಂದ ಖಿನ್ನತೆಗೆ ಜಾರಿದ್ದಾಳೆ ಎಂದು ಜಯಚಂದ್ರನ್​ ದೂರು ನೀಡುತ್ತಾರೆ. ಸೂಕ್ರ ಕ್ರಮ ತೆಗೆದುಕೊಳ್ಳುವುದಾಗಿ ಅನಿಲ್​ ಕಾಂತ್​ ಭರವಸೆ ನೀಡುತ್ತಾರೆ. ಅಲ್ಲದೆ, ತನಿಖೆಗೆ ಆದೇಶ ನೀಡುತ್ತಾರೆ.
ಆದಾಗ್ಯೂ ರೆಜಿತಾ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಒಳ್ಳೆಯ ಜಾಗಕ್ಕೆ ಅವರನ್ನು ವರ್ಗಾವಣೆ ಮಾಡಲಾಗುತ್ತದೆ. ಸಾಕಷ್ಟು ಮನವಿ ಮತ್ತು ದೂರುಗಳನ್ನು ನೀಡಿದರೂ ಜಯಚಂದ್ರನ್​ ಕುಟುಂಬಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ. ಕೊನೆಗೆ ನ್ಯಾಯಾಲಯ ಮೆಟ್ಟಿಲೇರಿದ ಕುಟುಂಬ, ರೆಜಿತಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.(ಏಜೆನ್ಸೀಸ್​)
8ರ ಬಾಲಕಿ ಮೇಲೆ ಸುಳ್ಳು ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್​ಗೆ ಶಾಕ್​ ಮೇಲೆ ಶಾಕ್​!

ಬಿಆರ್​ಟಿ ಅರಣ್ಯದ ಬೆಟ್ಟಗಳು ನೀಲಿಮಯ! 12 ವರ್ಷದ ಬಳಿಕ ಬೆಟ್ಟದ ತುಂಬೆಲ್ಲಾ ನಳನಳಿಸುತ್ತಿದೆ ನೀಲಕುರಂಜಿ ಹೂವು

ಗರ್ಭಿಣಿ ಅಕ್ಕನ ತಲೆಯನ್ನು ತುಂಡರಿಸಿ ಸೆಲ್ಫಿ ತೆಗೆದುಕೊಂಡ ತಮ್ಮ! ಈ ದುಷ್ಕೃತ್ಯದಲ್ಲಿ ಅಮ್ಮನೂ ಭಾಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 6 =
Remember me
