ಚೆನ್ನೈ:ಚೆನ್ನೈ ಹೊರವಲಯದ ಪನೈಯುರ್​ನಲ್ಲಿರುವ ಕಾಲಿವುಡ್​ ಸೂಪರ್​ ಸ್ಟಾರ್​ ನಟ ವಿಜಯ್​ ಅವರ ಕಚೇರಿಯ ಆವರಣದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಶುಕ್ರವಾರ ಮುಂಜಾನೆ ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮೃತ ವ್ಯಕ್ತಿಯನ್ನು ಪ್ರಭಾಕರನ್​ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ವಿಜಯ್ ಮಕ್ಕಳ್ ಇಯಕ್ಕಂನ ಮುಖ್ಯ ಕಚೇರಿಯು ಇಸಿಆರ್ ರಸ್ತೆಯಲ್ಲಿರುವ ಪನೈಯೂರಿನಲ್ಲಿರುವ ಬಂಗಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತದೆ. ಕಟ್ಟಡವನ್ನು ಈಗ ನವೀಕರಿಸಲಾಗುತ್ತಿದ್ದು, ಹಳೆ ವಾಷರಮನ್‌ಪೇಟೆ ಮೂಲದ ಪ್ರಭಾಕರನ್ ಎಂಬ ಪೇಂಟರ್ ಒಂದು ತಿಂಗಳಿನಿಂದ ಗುತ್ತಿಗೆ ಆಧಾರದ ಮೇಲೆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಯವರನ್ನು ಭೇಟಿ ಮಾಡಿ ಬುಧವಾರ ರಾತ್ರಿ ವಾಪಸಾಗಿದ್ದ ಪ್ರಭಾಕರನ್​, ಕುಡಿದ ಮತ್ತಿನಲ್ಲಿ ಪರೋಟ ಖರೀದಿಸಲು ಸೂಪರ್​ವೈಸರ್​ ಬಳಿ ನೂರು ರೂಪಾಯಿ ಕೇಳಿದ್ದರು ಎನ್ನಲಾಗಿದೆ.
ಮರುದಿನ ಬೆಳಿಗ್ಗೆ 8 ಗಂಟೆ ಸುಮಾರಿಗೆ ಪ್ರಭಾಕರನ್ ಕೈಯಲ್ಲಿ ಮತ್ತು ಬಾಯಿಯಲ್ಲಿ ಪರೋಟ ಇರುವ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಮದ್ಯದ ಅಮಲಿನಲ್ಲಿ ಗಟ್ಟಿಯಾದ ಆಹಾರವನ್ನು ತಿನ್ನಲು ಯತ್ನಿಸಿದಾಗ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ.
ವಿಜಯ್ ಅವರು ಪ್ರಸ್ತುತ ವಂಶಿ ಪೈಡಿಪಲ್ಲಿ ನಿರ್ದೇಶನದ ‘ತಲಪತಿ 66’ ಚಿತ್ರೀಕರಣದಲ್ಲಿದ್ದು, ಥಮನ್ ಸಂಗೀತ ಸಂಯೋಜನೆ ಮತ್ತು ದಿಲ್ ರಾಜು ನಿರ್ಮಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ವಿಜಯ್​ಗೆ ಮೊದಲ ಬಾರಿಗೆ ಜೋಡಿಯಾಗಿದ್ದು, ಪ್ರಭು, ಶರತ್‌ಕುಮಾರ್, ಜಯಸುಧಾ, ಶ್ರೀಕಾಂತ್, ಪ್ರಕಾಶ್ ರಾಜ್, ಶಾಮ್, ಖುಷ್ಬು, ಸಂಗೀತಾ ಕ್ರಿಶ್, ಸಂಯುಕ್ತಾ ಮತ್ತು ಯೋಗಿ ಬಾಬು ಮುಂತಾದವರ ತಾರಾಗಣವಿದೆ.(ಏಜೆನ್ಸೀಸ್​)
ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವರ ತವರು ಜಿಲ್ಲೆ ತುಮಕೂರಿಗೆ 28ನೇ ಸ್ಥಾನ!

VIDEO| 100ನೇ ವಸಂತಕ್ಕೆ ಕಾಲಿಟ್ಟ ತಾಯಿ ಹೀರಾಬೆನ್​ರ ಪಾದಪೂಜೆ ಮಾಡಿದ ಪ್ರಧಾನಿ ಮೋದಿ

ಮಾರ್ಗ ಮಧ್ಯೆ ಲೈಂಗಿಕ ಬಯಕೆ ಈಡೇರಿಸಿ! ಅಮಲಾ​ರನ್ನು ಮಂಚಕ್ಕೆ ಕರೆದವರಿಗೆ ಬಿಗ್​ ಶಾಕ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − seven =
Remember me
