ತಿರುವನಂತಪುರಂ:ದೇಶದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಬೆಲೆ ಏರಿಕೆಗೆ ಯಾವಾಗ ಕಡಿವಾಣ ಬೀಳುತ್ತದೆ ಎಂದು ಜನರು ಆಸೆಗಣ್ಣಿನಿಂದ ಎದುರು ನೋಡುತ್ತಿರುವಾಗಲೇ ಇಂದು ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 50 ರೂಪಾಯಿ ಏರಿಕೆಯಾಗಿರುವುದು ಜನ ಸಾಮಾನ್ಯರ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ.
ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಶನಿವಾರ 1000 ಗಡಿ ದಾಟಿದೆ. 50 ರೂ. ಬೆಲೆ ಏರಿಕೆಯೊಂದಿಗೆ 14.5 ಕೆಜಿ ಸಿಲಿಂಡರ್​ನ ಬೆಲೆ 1006 ರೂಪಾಯಿ ಆಗಿದೆ. ಇದರ ಬೆನ್ನಲ್ಲೇ ತಿರುವನಂತಪುರಂ ಮೇಯರ್​ ಆರ್ಯಾ ರಾಜೇಂದ್ರನ್ ಅವರು​ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನರ ಪರವಾಗಿ ಧ್ವನಿ ಏರಿಸಿದ್ದಾರೆ.
ಇಂದು ಬೆಳಗ್ಗೆ ನಾನು ಮನೆ ಬಿಡುವಾಗ ನನ್ನ ತಾಯಿ ಸಿಲಿಂಡರ್​ ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದು ಹೀಗೆ ಮುಂದುವರಿದರೆ ನನ್ನ ಮದುವೆಯ ಹೊತ್ತಿಗೆ ಸಿಲಿಂಡರ್​ ಬೆಲೆ ಸುಮಾರು 3,000 ರೂ. ಆಗುತ್ತದೆ. ಈ ರೀತಿ ಗ್ಯಾಸ್​ ಬೆಲೆ ಏರಿದರೆ, ಕುಟುಂಬಗಳ ಆರ್ಥಿಕ ಭದ್ರತೆಯನ್ನು ನಾಶ ಮಾಡಿದಂತಾಗುತ್ತದೆ ಎಂದು ಬೆಲೆ ಏರಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಭವಿಷ್ಯವೇ ಪ್ರಶ್ನೆಯಾಗಿರುವ ಲಕ್ಷಾಂತರ ಹೆಣ್ಣುಮಕ್ಕಳ ಪ್ರತಿನಿಧಿಯಾಗಿ, ನಿರುದ್ಯೋಗ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಪ್ರಧಾನಿ ಮೋದಿ ಅವರಿಗೆ ಮೇಯರ್​ ಆರ್ಯಾ ರಾಜೇಂದ್ರನ್​ ಒತ್ತಾಯಿಸಿದ್ದಾರೆ.
ಅಂದಹಾಗೆ ಆರ್ಯಾ ರಾಜೇಂದ್ರನ್​ ಅವರು 21ನೇ ವಯಸ್ಸಿನಲ್ಲೇ ತಿರುವನಂತಪುರದ ಆಲ್ ಸೇಂಟ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವಾಗಲೇ ತಿರುವನಂತಪುರದ ಮೇಯರ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇದಲ್ಲದೆ, ಕೇರಳ ರಾಜ್ಯದ ಅತಿ ಕಿರಿಯ ಶಾಸಕ ಕೆ.ಎಂ. ಸಚಿನ್ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದಾರೆ.(ಏಜೆನ್ಸೀಸ್​)

ದೇಶದ ಅತಿ ಕಿರಿಯ ಮೇಯರ್​ಗೂ ರಾಜ್ಯದ ಅತಿ ಕಿರಿಯ ಶಾಸಕನಿಗೂ ಮದುವೆ..!

ಎಸ್​ಐ ಪ್ರೀತಿಯ ಬಲೆಯಲ್ಲಿ ಬಿದ್ದ ಯುವತಿಗೆ ಪೊಲೀಸಪ್ಪನ ಮತ್ತೊಂದು ಮುಖ ಗೊತ್ತಾಗಿ ಆತ್ಮಹತ್ಯೆಗೆ ಶರಣು!

ನಾಳೆ ಸೈಕ್ಲೋನ್ ಸೃಷ್ಟಿ? 19 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
