ನವದೆಹಲಿ:ದೇಶದ ಜನತೆಗೆ ಸತತ ಇಂಧನ ದರ ಏರಿಕೆಯ ಬಿಸಿ ಜೋರಾಗಿಯೇ ತಟ್ಟಿದೆ. ಕಳೆದ 10 ದಿನಗಳಿಂದ ನಿರಂತರವಾಗಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಕೇವಲ 10 ದಿನಗಳಲ್ಲೇ 9ನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಆಯಿಲ್​ ಕಂಪನಿಗಳು ಗ್ರಾಹಕರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ನೀಡುತ್ತಿವೆ. ಇಂದು (ಮಾ.31) ಪೆಟ್ರೋಲ್ ಮತ್ತು ಡೀಸೆಲ್​ ಕ್ರಮವಾಗಿ 80​ ಪೈಸೆಯಷ್ಟು ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 6.40 ರೂ. ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರ ಬದುಕು ಭಾರವಾಗಿದೆ.
ಮಾರ್ಚ್​ 22 ರಿಂದ ಆರಂಭವಾದ ಇಂಧನ ದರ ಏರಿಕೆ ಬಿಸಿಗೆ ಮಾ. 24 ಒಂದು ದಿನ ಮಾತ್ರ ವಿರಾಮ ನೀಡಲಾಗಿತ್ತು. ಇದೀಗ ಪ್ರತಿದಿನ ಬೆಲೆ ಏರಿಕೆ ಮಾಡಲಾಗುತ್ತಿದೆ. ಇಂದು ಕೂಡ ಬೆಲೆ ಏರಿಕೆಯಾಗಿದೆ. ನಾಳೆಯು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೆಡೆ ಯೂಕ್ರೇನ್​-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ ದರ ಮತ್ತೊಮ್ಮೆ ಏರಿಕೆಯಾಗಿರುವುದು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಇನ್ನಷ್ಟು ತಟ್ಟಲಿದೆ. ಸಾಮಾನ್ಯ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಇಂದು ಬೆಳಗ್ಗೆ 6 ಗಂಟೆಯಿಂದಲೇ ದರ ಏರಿಕೆ ಪರಿಷ್ಕರಣೆಯಾಗಿದ್ದು, ಇಂದಿನ ಇಂಧನ ದರ ಈ ಕೆಳಕಂಡಂತಿದೆ
ಬೆಂಗಳೂರುಪೆಟ್ರೋಲ್​: ಪ್ರತಿ ಲೀಟರ್​ಗೆ 107.26 ರೂಪಾಯಿಡೀಸೆಲ್​: ಪ್ರತಿ ಲೀಟರ್​ಗೆ 91.29 ರೂಪಾಯಿ
ದೆಹಲಿಪೆಟ್ರೋಲ್​: 101.81 ರೂಪಾಯಿಡೀಸೆಲ್​: 99.07
ಮುಂಬೈಪೆಟ್ರೋಲ್​: 116.72 ರೂ.ಡೀಸೆಲ್​: 100.94
ಚೆನ್ನೈಪೆಟ್ರೋಲ್​: 107.49 ರೂ.ಡೀಸೆಲ್​: 97.56
ಕೊಲ್ಕತಪೆಟ್ರೋಲ್​: 111.32 ರೂ.ಡೀಸೆಲ್​: 96.22
ಹೈದರಾಬಾದ್​ಪೆಟ್ರೋಲ್​: 115.32 ರೂ.ಡೀಸೆಲ್​: 101.51
ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರುಗತಿಯಲ್ಲಿದೆ. 10 ದಿನದಲ್ಲಿ 9ನೇ ಬಾರಿ ಏರಿಕೆಯಾಗಿದೆ. ಪಂಚ ರಾಜ್ಯ ಚುನಾವಣೆ ಬೆನ್ನಲ್ಲೇ ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.
ಸ್ಥಳೀಯ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಅಂತರಾಷ್ಟ್ರೀಯ ಬೆಲೆಗಳಿಗೆ ಸಂಬಂಧಿಸಿವೆ. ಇದು ಕಚ್ಚಾ ತೈಲ ಬೆಲೆಗಳ ಮೇಲೆ ನಿರ್ಧಾರವಾಗಿರುತ್ತದೆ. ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.(ಏಜೆನ್ಸೀಸ್​)
ಡಿವೋರ್ಸ್ ಬೆನ್ನಲ್ಲೇ ಮಾಜಿ ಪತಿಗೆ ಶಾಕ್​ ಕೊಟ್ಟ ಸೆಲೆಬ್ರಿಟಿ IAS ಅಧಿಕಾರಿ ಟೀನಾ ಡಾಬಿ!

ರಾಜ್ಯದಲ್ಲಿ ಭೂಸ್ವಾಧೀನ ವಿಳಂಬ; ಕರ್ನಾಟಕದಲ್ಲಿ ರಸ್ತೆ ಕಾಮಗಾರಿ ನಿಧಾನಕ್ಕೆ ಕಾರಣ ನೀಡಿದ ಗಡ್ಕರಿ

ಪುರಿ ಜತೆ ವಿಜಯ್ ದೇವರಕೊಂಡ; ಲೈಗರ್ ಬಿಡುಗಡೆಗೂ ಮೊದಲೇ ಜನಗಣಮನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 16 =
Remember me
