ನವದೆಹಲಿ:ಇಂದು ಯಾವುದೇ ಭಯ, ಒತ್ತಡವಿಲ್ಲದೆ ತನ್ನ ಹಿತಾಸಕ್ತಿಗಾಗಿ ಗಟ್ಟಿಯಾಗಿ ನಿಲ್ಲುವಂತಹ ಭಾರತ ಜಗತ್ತಿನ ಮುಂದಿದೆ. ಇಡೀ ಜಗತ್ತನ್ನು ಎರಡು ಪ್ರತಿಸ್ಪರ್ಧಿ ಬಣಗಳಾಗಿ ವಿಂಗಡಿಸಿದಾಗ, ಭಾರತವನ್ನು ಮಾನವೀಯತೆಯ ಬಗ್ಗೆ ದೃಢವಾಗಿ ಮಾತನಾಡುವ ರಾಷ್ಟ್ರವಾಗಿ ನೋಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಬಿಜೆಪಿಯ 42ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ವರ್ಷದ ಬಿಜೆಪಿ ಸಂಸ್ಥಾಪನಾ ದಿನವು 3 ಕಾರಣಗಳಿಂದ ಬಹಳ ಮಹತ್ವದ್ದಾಗಿದೆ. ಮೊದಲನೆಯದಾಗಿ, ನಾವು ಸ್ವಾತಂತ್ರ್ಯದ 75 ವರ್ಷಗಳನ್ನು ಆಚರಿಸುತ್ತಿದ್ದೇವೆ. ಇದು ಸ್ಫೂರ್ತಿಯ ಪ್ರಮುಖ ಸಂದರ್ಭವಾಗಿದೆ. ಎರಡನೆಯದಾಗಿ ವೇಗವಾಗಿ ಬದಲಾಗುತ್ತಿರುವ ಜಾಗತಿಕ ಪರಿಸ್ಥಿತಿಯಿಂದಾಗಿ ಭಾರತಕ್ಕೆ ನಿರಂತರವಾಗಿ ಹೊಸ ಅವಕಾಶಗಳು ಬರುತ್ತಿವೆ. ಮೂರನೆಯದಾಗಿ ಇತ್ತೀಚೆಗೆ 4 ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. 3 ದಶಕಗಳ ನಂತರ ಪಕ್ಷವೊಂದು ರಾಜ್ಯಸಭೆಯಲ್ಲಿ 100 ಸದಸ್ಯರ ಗಡಿ ಮುಟ್ಟಿದೆ ಎಂದು ಪ್ರಧಾನಿ ಹೇಳಿದರು.
ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡೂ ಕೈಗಳಲ್ಲಿ ಕಮಲದ ಹೂಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿಯ 42 ನೇ ಸಂಸ್ಥಾಪನಾ ದಿನದಂದು ಅವರ ಆಶೀರ್ವಾದವು ಪ್ರತಿಯೊಬ್ಬ ನಾಗರಿಕ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಮುಂದುವರಿಯಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದರು.
ಯಾವುದೇ ಪಕ್ಷದ ಸರ್ಕಾರವಿರಲಿ ದೇಶಕ್ಕೆ ಏನನ್ನೂ ಮಾಡುವುದಿಲ್ಲ ಎಂದು ಜನ ಒಪ್ಪಿಕೊಂಡಿದ್ದ ಕಾಲವೊಂದಿತ್ತು. ಹತಾಶೆ ಇತ್ತು. ಇಂದು ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶ ಬದಲಾಗುತ್ತಿದೆ ಮತ್ತು ವೇಗವಾಗಿ ಮುನ್ನಡೆಯುತ್ತಿದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆಂದು ತಿಳಿಸಿದರು.
ಇಂದು ಭಾರತ 180 ಕೋಟಿ ಕೋವಿಡ್​ ಲಸಿಕೆ ಪೂರ್ಣಗೊಳಿಸಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಭಾರತವು 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ನೀಡುತ್ತಿರುವುದನ್ನು ಇಂದು ಜಗತ್ತು ನೋಡುತ್ತಿದೆ. ಬಡವರು ಖಾಲಿ ಹೊಟ್ಟೆಯಲ್ಲಿ ಮಲಗದಂತೆ ನೋಡಿಕೊಳ್ಳಲು ಕೇಂದ್ರವು ಸುಮಾರು 3.5 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಹೇಳಿದರು.
ಕೆಲವು ಪಕ್ಷಗಳು ಕೇವಲ ವೋಟ್ ಬ್ಯಾಂಕ್ ರಾಜಕಾರಣವನ್ನು ದಶಕಗಳಿಂದ ಮಾಡಿವೆ. ಕೆಲವರಿಗೆ ಮಾತ್ರ ಭರವಸೆಗಳನ್ನು ನೀಡುವುದು, ಪಕ್ಷಪಾತ ಮತ್ತು ಭ್ರಷ್ಟಾಚಾರವು ವೋಟ್ ಬ್ಯಾಂಕ್ ರಾಜಕಾರಣದ ಅಡ್ಡ ಪರಿಣಾಮವಾಗಿದೆ. ಬಿಜೆಪಿ ಇದಕ್ಕೆ ಸವಾಲು ಎಸೆದಿದ್ದಲ್ಲದೆ, ಅದರ ಹಾನಿಯನ್ನು ಜನರಿಗೆ ಅರ್ಥ ಮಾಡಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿಯ 42 ನೇ ಸಂಸ್ಥಾಪನಾ ದಿನದಂದು, ಜನಸಂಘದ ಕಾಲದಿಂದ ಮೊದಲು ಎಣ್ಣೆ ದೀಪದೊಂದಿಗೆ, ನಂತರ ಕಮಲದೊಂದಿಗೆ ಪಕ್ಷದ ಜತೆ ನಡೆದವರನ್ನು ನಾವು ನೆನಪಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.(ಏಜೆನ್ಸೀಸ್​)
ಮಣ್ಣು ಮಾಡಿ ಬಂದ ಮಾರನೇ ದಿನವೇ ಕುಟುಂಬಸ್ಥರಿಗೆ ಕಾದಿತ್ತು ಶಾಕ್​: ತಮಿಳುನಾಡಿನಲ್ಲಿ ಅಚ್ಚರಿಯ ಘಟನೆ!

ರಿಯಲ್ ಎಸ್ಟೇಟ್ ಎಕ್ಸ್​ಪೋ ವೇದಿಕೆ ಸಿದ್ಧ: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜನೆ

ಬಳ್ಳಾರಿಯ ಸಬ್​ ರಿಜಿಸ್ಟ್ರಾರ್ ಕರ್ಮಕಾಂಡ: ಮಾಡೆಲ್​ ಜತೆ ಮಂಚವೇರಿ ಮಗು ಕರುಣಿಸಿದವನ ಕರಾಳ ಕತೆಯಿದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 13 =
Remember me
