ದುಬೈ:ಪ್ರಖ್ಯಾತ ವ್ಲಾಗರ್​ ಮತ್ತು ಮಲಯಾಳಂ ಆಲ್ಬಂ ಸ್ಟಾರ್​ ರಿಫಾ ಮೆಹ್ನು (21) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತಿ ಮೆಹ್ನಾಸ್​ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿ ಮೆಹ್ನಾಸ್​ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 498-ಎ (ಮಹಿಳೆಯ ಮೇಲೆ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಅಡಿಯಲ್ಲಿ ಆರೋಪ ಸಾಬೀತಾದರೆ, ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಅಂದಹಾಗೆ ರಿಫಾ, ಕೇರಳದ ಕೊಯಿಕ್ಕೋಡ್​ ನಗರದ ಬಲುಸ್ಸೆರಿ ಮೂಲದ ನಿವಾಸಿ. ದುಬೈನ ಜಫ್ಫಿಲಿಯಾದಲ್ಲಿರುವ ಫ್ಲ್ಯಾಟ್​ನಲ್ಲಿ ಮಾರ್ಚ್​ 1ರಂದು ಶವವಾಗಿ ಪತ್ತೆಯಾಗಿದ್ದರು. ತಮ್ಮ ಪತಿ ಮೆಹ್ನಾಸ್​​​ ಮತ್ತು ಮಗಳ ಜತೆ ದುಬೈನಲ್ಲಿ ನೆಲೆಸಿದ್ದರು. ಈ ಹಿಂದೆಯೇ ಕಕ್ಕೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ದೈಹಿಕ ಹಾಗೂ ಮಾನಸಿಕ ಹಿಂಸೆಯೇ ರಿಫಾ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಅಲ್ಲದೆ, ದುಬೈ ಪೊಲೀಸರು ಕೂಡ ಇದೇ ಹೇಳಿಕೆಯನ್ನು ನೀಡಿದ್ದಾರೆ.
ಇದರ ನಡುವೆ ಇದೀಗ ರಿಫಾ ಸಂಬಂಧಿಯೊಬ್ಬರು ಕೋಯಿಕ್ಕೋಡ್​ ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಎ. ಶ್ರೀನಿವಾಸನ್​ ಬಳಿ ದೂರು ದಾಖಲಿಸಿದ್ದಾರೆ. ಎಸ್​ಪಿಯು ಕೂಡ ಆರೋಪಿ ಮೆಹ್ನಾಸ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇನ್ನು ರಿಫಾ ಮತ್ತು ಪತಿಯ ನಡುವಿನ ಸಂಬಂಧ ಹದಗೆಟ್ಟಿತ್ತು ಎಂದು ಆಕೆಯ ಆಪ್ತರು ಹೇಳಿದ್ದಾರೆ. ಕುಟುಂಬದ ಆದಾಯ ಖರ್ಚು ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು ಎಂದು ಹೇಳಲಾಗಿದೆ. ರಿಫಾ ಸಾವಿಗೆ ಪ್ರಚೋದನೆ ನೀಡಲಾಗಿದ್ದು, ಪತಿಯನ್ನು ಈ ಕ್ಷಣ ವಿಚಾರಣೆಗೆ ಒಳಪಡಿಸಬೇಕು ಎಂದು ರಿಫಾ ಆಪ್ತರು ಮತ್ತು ಕುಟುಂಬಸ್ಥರು ಮೊದಲೇ ಒತ್ತಾಯಿಸಿದ್ದರು. ಇದೀಗ ಪ್ರಾಥಮಿಕ ತನಿಖೆಯಲ್ಲಿ ದೌರ್ಜನ್ಯ ಎಸಗಿರುವುದು ಬಯಲಾಗಿದೆ.
ರಿಫಾ ಅವರು ಆಹಾರ ಮತ್ತು ಫ್ಯಾಶನ್​ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದರು. ಕೇರಳದಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದಿದ್ದರು. ಸದಾ ಸಾಮಾಜಿಕ ಜಾಲತಾಣದಲ್ಲಿ ರಿಫಾ ಬಿಜಿಯಾಗಿರುತ್ತಿದ್ದರು. ಸಾವಿಗೂ ಕೆಲವು ಕ್ಷಣಗಳ ಹಿಂದೆಯೂ ಆಕೆ ಜಾಲತಾಣದಲ್ಲಿ ಸಕ್ರೀಯರಾಗಿದ್ದರು. ರಿಫಾ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ದಂಪತಿ ಎರಡು ವರ್ಷದ ಓರ್ವ ಗಂಡು ಮಗನಿದ್ದಾನೆ.(ಏಜೆನ್ಸೀಸ್​)
ಚಾಮರಾಜನಗರದಲ್ಲಿ ಯುವತಿ ಸಾವು, ಕದ್ದು ಮುಚ್ಚಿ ಅಂತ್ಯಸಂಸ್ಕಾರ… ವಾರದ ಬಳಿಕ ಸ್ಫೋಟಕ ಮಾಹಿತಿ ಬಯಲು

PSI ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಆದೇಶಿಸಿದ ಸರ್ಕಾರ

ದಕ್ಷಿಣದ ಸಿನಿಮಾಗಳನ್ನು ನೋಡಿ ಬಾಲಿವುಡ್​ ಹೆದರಿದೆ: ಪಾಠ ಕಲಿಯದಿದ್ರೆ ಕಷ್ಟ ಅಂದ್ರು ಮನೋಜ್​ ಬಾಜ್ಪೇಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
