ನವದೆಹಲಿ:2023 ಸೆಪ್ಟೆಂಬರ್​ 24ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್​ ನಟಿ ಪರಿಣಿತಿ ಚೋಪ್ರಾ ಹಾಗೂ ಎಎಪಿ ರಾಜ್ಯಸಭೆ ಸದಸ್ಯ ರಾಘವ್​ ಚಡ್ಡಾ ಮದುವೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಇವರಿಬ್ಬರ ಅನ್ಯೋನ್ಯತೆ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲಾ ರಾಘವ್​ ಚಡ್ಡಾ ಅವರು ತಮ್ಮ ದೃಷ್ಠಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಲಂಡನ್​ನಲ್ಲಿ ವಿಟ್ರೆಕ್ಟಮಿ ಚಿಕಿತ್ಸೆಗೆ ಒಳಗಾಗಿರುವ ಸಂಸದ ರಾಘವ್​ ಚಡ್ಡಾ ತೀವ್ರ ಕಣ್ಣಿನ ನೋವಿನಿಂದ ಬಳಲುತ್ತಿದ್ದು, ಅವರು ದೃಷ್ಠಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ. ಈ ಕುರಿತು ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸೌರಭ್​ ಭಾರದ್ವಾಜ್​ ಪ್ರತಿಕ್ರಿಯಿಸಿದ್ದಾರೆ.
VIDEO | "Raghav Chadha has undergone major eye surgery in the UK. It is said that his condition was serious and there was a possibility of blindness. As soon as he gets better, he will come back to India and join us in the election campaigning," says Delhi Minister and AAP leader…pic.twitter.com/o3A0hJYrAt
ಇದನ್ನೂ ಓದಿ:ಉಪನಾಯಕ ಫುಲ್​ ಫಾರ್ಮ್​ನಲ್ಲಿದ್ದಾರೆ ಹುಷಾರ್​…; ಆಯ್ಕೆ ಸಮಿತಿ ನಿರ್ಧಾರವನ್ನು ಟೀಕಿಸಿದ ನೆಟ್ಟಿಗರು
ರಾಘವ್​ ಚಡ್ಡಾ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಅವರು ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಲಂಡನ್​ನಲ್ಲಿ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸಮಸ್ಯೆ ಗಂಭೀರವಾಗಿದ್ದು, ಕಣ್ಣುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಚೇತರಿಸಿಕೊಂಡ ಬಳಿಕ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಸೌರಭ್​ ಭಾರದ್ವಾಜ್​ ತಿಳಿಸಿದ್ದಾರೆ.
ಇತ್ತ ರಾಘವ್​ ಚಡ್ಡಾ ಅವರ ವಿಚಾರ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಅವರು ಶೀಘ್ರ ಗುಣಮುಖರಾಗಲಿ ಎಂಧು ಹಾರೈಸಿದ್ದಾರೆ. ಇದೀಗ ಪತಿ ಕಣ್ಣಿನ ಸಮಸ್ಯೆ ಪರಿಣಿತಿ ಚೋಪ್ರಾರನ್ನು ಚಿಂತೆಗೀಡು ಮಾಡಿದ್ದು, ಹಲವರು ರಾಘವ್​ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 15 =
Remember me
