ನವದೆಹಲಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ತಮ್ಮ ನಿವಾಸದಲ್ಲಿ ತರಕಾರಿ ವ್ಯಪಾರಿಯೊಬ್ಬರಿಗೆ ಆತಿಥ್ಯ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಬೆಲೆ ಏರಿಕೆಯಿಂದ ತಮ್ಮ ಶೋಚನೀಯ ಪರಿಸ್ಥಿತಿಯ ಬಗ್ಗೆ ಮಾತನಾಡಿದ ತರಕಾರಿ ವ್ಯಾಪಾರಿ ರಾಮೇಶ್ವರ್ ಅವರ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಊಟ ಮಾಡಿದರು. ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಅವರು ಊಟ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Independence Day; ಮನಸ್ಸಿನಲ್ಲಿ ದೇಶಭಕ್ತಿಯನ್ನು ಇಮ್ಮಡಿಗೊಳಿಸುವ ಸುಂದರ ತಾಣಗಳು…ಸಾಧ್ಯವಾದರೆ ಒಮ್ಮೆ ನೋಡಿ..
ಇತ್ತೀಚೆಗಷ್ಟೇ ತರಕಾರಿ ಮಾರುಕಟ್ಟೆಯಲ್ಲಿ ರಾಮೇಶ್ವರ ಎಂಬ ರೈತ ಖಾಲಿ ಬಂಡಿಯೊಂದಿಗೆ ಕಾಣಿಸಿಕೊಂಡಿದ್ದ. ಇದಕ್ಕೆ ಕಾರಣವೇನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಟೊಮ್ಯಾಟೋ ಬೆಲೆ ಹೆಚ್ಚಿರುವುದರಿಂದ ಖರೀದಿಸಲು ಸಾಧ್ಯವಾಗುತ್ತಿಲ್ಲ. ನೀವು ಬೇರೆ ಯಾವುದೇ ತರಕಾರಿಗಳನ್ನು ಖರೀದಿಸುತ್ತೀರಾ? ಎಂದು ಕೇಳಿದರೆ ನನ್ನ ಬಳಿ ಹಣವಿಲ್ಲ ಎಂದು ಅಳಲು ತೋಡಿಕೊಂಡರು. ವಿಡಿಯೋ ವೈರಲ್ ಆಗಿತ್ತು.

ಈ ವಿಡಿಯೋ ನೋಡಿದ ರಾಹುಲ್ ಜೊತೆಗೆ ಕಾಂಗ್ರೆಸ್ ನಾಯಕರು ಬೆಲೆ ಏರಿಕೆ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಬಯಸುವುದಾಗಿ ರಾಮೇಶ್ವರ್ ಆ ವಿಡಿಯೋದಲ್ಲಿ ಹೇಳಿದ್ದಾರೆ. ಅವರ ಆಸೆ ಈಡೇರಿಸಲು ರಾಹುಲ್ ಗಾಂಧಿ ರಾಮೇಶ್ವರ್ ಅವರನ್ನು ಆಹ್ವಾನಿಸಿ ಅವರೊಂದಿಗೆ ಊಟ ಮಾಡಿದರು. ಅವರ ಕಷ್ಟಗಳನ್ನು ವಿಚಾರಿಸಿದರು.
ಸ್ವತಃ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ‘ರಾಹುಲ್ ಗಾಂಧಿ ಜನರ ನಿಜವಾದ ನಾಯಕ’ ಎಂದು ಕಮೆಂಟ್ ಮಾಡಿದ್ದಾರೆ.
ಸಮುದ್ರತೀರದಲ್ಲಿ ಮಗುಗೆ ಜನ್ಮ ನೀಡಿದ ಮಹಿಳೆ; ಜನನ ಪ್ರಮಾಣ ಪತ್ರಕ್ಕೆ ದಂಪತಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ……

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve + six =
Remember me
