ಹೈದರಬಾದ್:ತೆಲಂಗಾಣ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್​ಎಸ್​ ಪಕ್ಷದ ನಾಯಕಿ, ಮುಖ್ಯಮಂತ್ರಿ ಕೆಸಿಆರ್​ ಪುತ್ರಿ ಕವಿತಾ ರಾಹುಲ್​ ಗಾಂಧಿ ಅವರನ್ನು ಪೇಪರ್ ಟೈಗರ್ ಎಂದು ಟೀಕಿಸಿದ್ದಾರೆ.
ತೆಲಂಗಾಣದ ಜಗ್​ತಿಯಾಲ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಇಲ್ಲಿನ ಸ್ಥಳೀಯ ರಾಜಕಾರಣವನ್ನು ಅರ್ಥ ಮಾಡಿಕೊಳ್ಳದೆ ರಾಹುಲ್​ ಗಾಂಧಿ ಯಾರೋ ಬರೆದುಕೊಟ್ಟ ಭಾಷಣವನ್ನು ಇಲ್ಲಿ ಓದುತ್ತಾರೆ. ಅವರು ಬಬ್ಬರ್​ ಶೇರ್​ ಅಲ್ಲ ಪೇಪರ್ ಟೈಗರ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಬಾಕಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್
ರಾಹುಲ್ ಗಾಂಧಿ ಈವರೆಗೂ ತೆಲಂಗಾಣದ ಸಂಪ್ರದಾಯ, ಸಂಸ್ಕೃತಿ ಮತ್ತು ಸ್ಥಳೀಯ ರಾಜಕಾರಣವನ್ನು ಅರ್ಥ ಮಾಡಿಕೊಳ್ಳಲು ಅವರಿಂದ ಸಾಧ್ಯವಾಗಿಲ್ಲ. ಐಆರೋ ಬರೆದುಕೊಟ್ಟ ಭಾಷಣವನ್ನು ಇಲ್ಲಿ ಬಂದು ಓದಿ ತೆರಳುತ್ತಾರೆ. ಇನ್ನೊಮ್ಮೆ ನೀವು ಆರೋಪಗಳನ್ನು ಮಾಡುವ ಒಮ್ಮೆ ಪರಿಶೀಲಿಸಿ ಆ ನಂತರ ಆರೋಪಗಳನ್ನು ಮಾಡಿ ಸುಮ್ಮನೇ ಪೇಪರ್​ ಟೈಗರ್ ಎನ್ನಿಸಿಕೊಳ್ಳಬೇಡಿ.
ತೆಲಂಗಾಣವು ರಾಜಕಾರಣದ ಬಗ್ಗೆ ಅತ್ಯಂತ ಅರಿವು ಹೊಂದಿರುವ ರಾಜ್ಯ. ಇಲ್ಲಿನ ಜನರು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಿ ಪ್ರಾಣ ತ್ಯಾಗ ಮಾಡಿದ್ದಾರೆ. ಮುಂದಿನ ಬಾರಿ ನೀವು ತೆಲಂಗಾಣಕ್ಕೆ ಭೇಟಿ ನೀಡಿದ ವೇಳೆ ಹೋಟೆಲ್​ಗೆ ಹೋಗಿ ದೋಸೆ ತಿನ್ನುವ ಬದಲು ತೆಲಂಗಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಮನೆಗೆ ತೆರಳಿ. ಅವರ ತಂದೆ-ತಾಯಿಯ ಬಳಿ ಕಷ್ಟ ಕೇಳಿ ಆಘ ನಿಮಗೆ ನಿಜವಾದ ಸಮಸ್ಯೆ ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್​ ಪುತ್ರಿ ಕವಿತಾ ರಾಹುಲ್​ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
