ರುದ್ರಪುರ:ಉತ್ತರ ಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಲೆಯ ಮೇಲೆ ನೀರು ಸುರಿದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . “ಗರ್ಮಿ ಹೈ ಕಾಫಿ…” (ಸಿಕ್ಕಾಪಟ್ಟೆ ಬಿಸಿಲು ಇದೆ) ಎಂದು ರಾಹುಲ್ ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು.
ಇದನ್ನೂ ಓದಿ:ರೆಬೆಲ್​ಸ್ಟಾರ್​ ಅಂಬರೀಶ್​ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಾಶಯ ಕೋರಿದ ದರ್ಶನ್
ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಂಥಾ ಬಿಸಿಲು ಎಂದು ಹೇಳಿದ್ದಾರೆ. ಇದಾದ ನಂತರ ನೀರಿನ ಬಾಟಲಿಯಿಂದ ಸ್ವಲ್ಪ ನೀರು ಕುಡಿದು, ಸ್ವಲ್ಪ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಇದು ಜನರ ಗಮನ ಸೆಳೆದಿದೆ. ರಾಹುಲ್ ಗಾಂಧಿಯವರ ವಿಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ, “ಕುರ್ಚಿಯ ಬೆಲ್ಟ್ ಗಟ್ಟಿಯಾಗಿ ಕಟ್ಟಿಕೊಳ್ಳಿ ತಾಪಮಾನ ಏರುತ್ತಿದೆ, ಇಂಡಿಯಾ ಬಣದ ಸರ್ಕಾರ ಬರುತ್ತಿದೆ ಎಂದು ಬರೆದಿದ್ದಾರೆ.
कुर्सी की पेटी बांध लीजिए, तापमान बढ़ रहा है.
INDIA की सरकार आ रही हैpic.twitter.com/ljtMgRsXAY
— Congress (@INCIndia)May 28, 2024

ಆಪ್ ಥೈಲ್ಯಾಂಡ್ ಕಾ ಟಿಕೆಟ್ ಕಾರ್ಲೋ (ನೀವು ಥಾಯ್ಲೆಂಡ್‌ಗೆ ಟಿಕೆಟ್ ಕಾಯ್ದಿರಿಸಬಹುದು)” ಎಂದು ಬಳಕೆದಾರರೊಬ್ಬರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, ಮತ್ತೊಬ್ಬ “ನೈಸ್ ಜೋಕ್…” ಎಂದು ಕಾಮೆಂಟ್ ಮಾಡಿದ್ದಾರೆ.
ರುದ್ರಪುರದಲ್ಲಿ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಮೈತ್ರಿಕೂಟ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದು ಟೀಕಿಸಿದರು.
“ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ, ಭಾರತ ಒಕ್ಕೂಟವು ಸಂವಿಧಾನವನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಡುತ್ತದೆ, ಆದರೆ ಅದನ್ನು ನಾಶಮಾಡಲು ಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಚಿಕ್ಕಬಳ್ಳಾಪುರ: 7ನೇ ಕ್ಲಾಸ್‌ ವಿದ್ಯಾರ್ಥಿನಿ ಈಗ 3 ತಿಂಗಳ ಗರ್ಭಿಣಿ, ಮುಖ್ಯಶಿಕ್ಷಕ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
