ಹೈದರಾಬಾದ್:ಮುಂಬರುವ ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಚುನಾವಣೆಯ ಹೊಸ್ತಿಲಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಒಂದಿಲ್ಲೊಂದು ತಂತ್ರಕ್ಕೆ ಕೈ ಹಾಕುತ್ತಿರುವ ಕಾಂಗ್ರೆಸ್​ ಪಕ್ಷದ ನಾಯಕರು ತುಸು ಭಿನ್ನವಾಗಿ ಪ್ರಚಾರ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.
Hyderabad crowd chanted PM..PM..when Rahul Gandhi Ji entered Bawarchi Restaurant to have dinner.Congress 75+ 🔥🔥pic.twitter.com/Gn1lAzlX7K
ಇದನ್ನೂ ಓದಿ:ಲಾಂಚ್​ಗೂ ಮುನ್ನವೇ ರೋಲ್​ ರಾಯ್ಸ್​ ಸ್ಪೆಕ್ಟರ್​ ಕಾರು ಖರೀದಿಸಿದ ಬಿಲ್ಡರ್; ಈ ಕಾರಣಕ್ಕೆ ಸ್ವ್ಯಾಗ್​ ಎಂದ ನೆಟ್ಟಿಗರು
ಇದೀಗ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ವೇಳೆ ಹೈದರಾಬಾದಿನ ಪ್ರತಿಷ್ಠಿತ ಹೋಟೆಲ್​ ಒಂದಕ್ಕೆ ಭೇಟಿ ನೀಡಿದ್ದು, ಅವರಿಗೆ ಭರ್ಜರಿ ಸ್ವಾಗತ ದೊರೆತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆರೆದಿದ್ದವರು ರಾಹುಲ್​ ಅವರನ್ನು ಪಿಎಂ ಪಿಎಂ ಎಂದು ಕರೆಯುತ್ತಿರುವುದನ್ನು ನೋಡಬಹುದಾಗಿದೆ.
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಥ್​ ನೀಡಿದ್ದು, ಈ ವೇಳೆ ಅವರು ಯುವಕರ ಜೊತೆ ಸಂವಾದ ನಡೆಸಿದ್ದಾರೆ. ಇತ್ತ ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಬಿಆರ್​ಎಸ್​ ನಾಯಕರು ಈ ರೀತಿಯ ಕೆಲಗಳನ್ನು ಮಾಡಿ ಮತ ಪಡೆಯಬಹುದು ಎಂದು ಊಹಿಸಿದ್ದರೆ ಅದು ನಿಮ್ಮ ತಪ್ಪು. ಜನ ಮಾತನಾಡುವವರಿಗಿಂತ ಕೆಲಸ ಮಾಡುವವರಿಗೆ ಮತ ಹಾಕುವುದು ಎಂದು ಪ್ರತಿಕ್ರಿಯಿಸಿದ್ದಾರೆ.
#WATCH| Telangana: Congress leader Rahul Gandhi yesterday interacted with people at a restaurant in Hyderabad.(Video Source: Congress)pic.twitter.com/yAut7xv80z
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 15 =
Remember me
