ಲಖನೌ:ಉತ್ತರಪ್ರದೇಶ ಪ್ರವಾಸದಲ್ಲಿರುವ ಸೂಪರ್​ಸ್ಟಾರ್​ ರಜನಿಕಾಂತ್​ ಭಾನುವಾರ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಅಖಿಲೇಶ್​​ ಯಾದವ್​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಶನಿವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹಾಗೂ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರನ್ನು ರಜನಿಕಾಂತ್​ ದಂಪತಿ ಭೇಟಿಯಾಗಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ರಜನಿಕಾಂತ್​ 9 ವರ್ಷಗಳ ಹಿಂದೆ ನಾನು ಆಖಿಲೇಶ್​ರನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮೊದಲ ಬಾರಿಗೆ ಭೇಟಿ ಮಾಡಿದ್ದೆ. ಅಂದಿನಿಂದ ಶುರುವಾರ ನಮ್ಮಿಬ್ಬರ ಸ್ನೇಹ ಇಂದಿಗೂ ಮುಂದುವರೆದಿದೆ. ಐದು ವರ್ಷಗಳ ಹಿಂದೆ ನಾನು ಸಿನಿಮಾ ಚಿತ್ರೀಕರಣಕ್ಕಾಗಿ ಇಲ್ಲಿಗೆ ಭೇಟಿ ನೀಡಿದ್ದೆ. ಆದರೆ, ಕಾರಣಾಂತರಗಳಿಂದ ಅಖಿಲೇಶ್​ರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ತುಂಬಾ ಖುಷಿ ನೀಡಿದೆ ಎಂದು ರಜನಿಕಾಂತ್​ ಪ್ರತಿಕ್ರಿಯಿಸಿದ್ದಾರೆ.
जब दिल मिलते हैं तो लोग गले मिलते हैं।मैसूर में इंजीनियरिंग की पढ़ाई के दौरान पर्दे पर रजनीकांत जी को देखकर जितनी ख़ुशी होती थी वो आज भी बरकरार है। हम 9 साल पहले व्यक्तिगत रूप से मिले और तब से दोस्ती है…pic.twitter.com/e9KZrc5mNH
ಇದನ್ನೂ ಓದಿ:ಇನ್ಮುಂದೆ ಇಂದಿರಾ ಕ್ಯಾಂಟಿನ್​ನಲ್ಲಿ ಊಟ ದುಬಾರಿ; ದರ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ನಿರ್ಧಾರ
ರಜನಿಕಾಂತ್​ ಜೊತೆಗಿನ ಭೇಟಿಯನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅಖಿಲೇಶ್​ ಯಾದವ್​ ನಾನು ಮೈಸೂರಿನಲ್ಲಿ ಇಂಜಿನಿಯರಿಂಗ್​ ಓದುವ ಸಮಯದಲ್ಲಿ ಅವರನ್ನು ಪರದೆ ಮೇಲೆ ನೋಡಿ ಅನುಭವಿಸಿದ ಆನಂದ ಈಗಲೂ ಇದೆ. ತುಂಬಾ ವರ್ಷಗಳ ನಂತರ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ ಎಂದು ಬಣ್ಣಿಸಿದ್ದಾರೆ.
ಈ ವಾರದ ಆರಂಭದಲ್ಲಿ ರಜನಿಕಾಂತ್​ ತಮ್ಮ ಬಹುಕಾಲದ ಗೆಳೆಯ, ಜಾರ್ಖಂಡ್​ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್​ ಅವರನ್ನು ಭೇಟಿ ಮಾಡಿದ್ದರು. ರಾಚಿಯಲ್ಲಿರುವ ಯಗೋಡ ಆಶ್ರಮಕ್ಕೆ ಭೇಟಿ ನೀಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
