ಗೌಚಾರ್ (ಉತ್ತರಾಖಂಡ):ಕೆಲವೇ ವರ್ಷಗಳಲ್ಲಿ ಕಾಂಗ್ರೆಸ್ ಡೈನೋಸಾರ್ ನಂತೆಯೇ ನಿರ್ನಾಮವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:Viral News: ಹೋಟೆಲ್​ನಲ್ಲಿ ಎಕ್ಸ್ಟ್ರಾ ಚಟ್ನಿ ಹಾಕುವ ವಯೋವೃದ್ಧ: ವಯಸ್ಸು ಜಸ್ಟ್‌ ನಂಬರ್ ಎಂದ ಶಾಸಕ ಸುರೇಶ್ ಕುಮಾರ್
ಉತ್ತರಾಖಂಡದ ಗೌಚಾರ್‌ನಲ್ಲಿ ನಡೆದ ಬೃಹತ್ ಬಿಜೆಪಿ ರ‍್ಯಾಲಿ ಮಾತನಾಡಿದ ಅವರು, ಕಾಂಗ್ರೆಸ್​ ಪಕ್ಷದ ಆಂತರಿಕ ಕಲಹವನ್ನು ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಲಿಸಿದರು.
ಕಾಂಗ್ರೆಸ್‌ನಿಂದ ನಾಯಕರ ವಲಸೆ ಮುಂದುವರೆದಿದೆ. ಒಬ್ಬರ ನಂತರ ಒಬ್ಬರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರುತ್ತಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ಕಾಂಗ್ರೆಸ್ ಡೈನೋಸಾರ್ ನಂತೆ ನಶಿಸಿಹೋಗುತ್ತದೆ ಎಂಬ ಭಯ ನನಗಿದೆ. 2024ರ ಬಳಿಕ ಕೆಲವೇ ವರ್ಷಗಳಲ್ಲಿ ಮಕ್ಕಳು ಕಾಂಗ್ರೆಸ್ ನಾಯಕರ ಹೆಸರು ಕೇಳಿದರೆ ಯಾರು ಎಂದು ಕೇಳುವ ಪರಿಸ್ಥಿತಿ ಬರಲಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್​ ಬಿಗ್​ ಬಾಸ್​ ಮನೆಯಂತೆ:ಕಾಂಗ್ರೆಸ್​ ಪ್ರತಿದಿನ ಪರಸ್ಪರ ಜಗಳವಾಡುತ್ತಿದ್ದಾರೆ. ಈ ಪಕ್ಷವು ಟಿವಿಯಲ್ಲಿ ಬರುವ ‘ಬಿಗ್ ಬಾಸ್’ ಮನೆಯಂತೆ ಮಾರ್ಪಟ್ಟಿದೆ ಎಂದು ರಾಜನಾಥ್​ ಸಿಂಗ್​ ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಕ್ಷಣಾ ಸಚಿವರು ಅದರ ಧ್ವನಿಯನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟವಾಗಿ ಕೇಳಲಾಗುತ್ತದೆ ಮತ್ತು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಉಕ್ರೇನ್‌ನಲ್ಲಿ ಸಿಲುಕಿರುವ 22,500 ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ನಂತರ ರಷ್ಯಾ-ಉಕ್ರೇನ್ ಯುದ್ಧವನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು.
ನಾವು ಈಗ ಭಾರತದಲ್ಲಿ ರಕ್ಷಣಾ ಸಾಧನಗಳನ್ನು ತಯಾರಿಸುತ್ತಿದ್ದೇವೆ. ಮೊದಲು ನಾವು ಕೇವಲ 600 ಕೋಟಿ ಮೌಲ್ಯದ ರಕ್ಷಣಾ ಸಾಧನಗಳನ್ನು ರಫ್ತು ಮಾಡುತ್ತಿದ್ದೆವು. ಏಳು ವರ್ಷಗಳಲ್ಲಿ ನಾವು 21,000 ಕೋಟಿಗೂ ಹೆಚ್ಚು ಮೌಲ್ಯದ ರಕ್ಷಣಾ ಸಾಧನಗಳನ್ನು ರಫ್ತು ಮಾಡುತ್ತಿದ್ದೇವೆ. ಭಾರತವು ಈಗ ಸಾಮಾನ್ಯ ದೇಶವಲ್ಲ ಎಂದು ರಕ್ಷಣಾ ಸಚಿವರು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು 370 ನೇ ವಿಧಿಯನ್ನು ರದ್ದುಗೊಳಿವುದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ, ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸುತ್ತೇವೆ ಎಂದು ನಾವು 1984 ರಿಂದ ಹೇಳುತ್ತಿದ್ದೆವು ಈಗ ಆ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್‌ನಂತಹ ಪಕ್ಷಗಳು ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ. ಅವರು ತಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡಾ 50 ರಷ್ಟು ಈಡೇರಿಸಿದ್ದರೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುತ್ತಿತ್ತು ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.
ಲೋಕ ಚುನಾವಣೆ: ಎರಡು ಮತಕ್ಕಾಗಿ ದಟ್ಟ ಕಾಡಿನಲ್ಲಿ 107 ಕಿಮೀ ಪ್ರಯಾಣ ಬೆಳೆಸಿದ ಅಧಿಕಾರಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
