ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆ ವೇಳೆ ಆಂಜನೇಯ, ಹನುಮಾನ್​ ಚಾಲೀಸಾಗಳನ್ನೆಲ್ಲ ರಾಜಕೀಯಗೊಳಿಸಿದ್ದು ಗೊತ್ತಿರುವ ವಿಚಾರವೇ.
ಹನುಮಂತನ ಪೂಜೆ ವಿಚಾರವನ್ನೇ ಇಟ್ಟುಕೊಂಡು ಬಿಜೆಪಿ ಮುಖಂಡರು ಮತ್ತು ಆಮ್​ ಆದ್ಮಿ ಪಾರ್ಟಿ ಮುಖಂಡರು ಪರಸ್ಪರ ಟೀಕೆ, ವಾಗ್ದಾಳಿ ಮಾಡಿಕೊಂಡಿದ್ದಾರೆ. ಚುನಾವಣಾ ಫಲಿತಾಂಶ ಬಂದು ಜಯಸಾಧಿಸಿದ ಅರವಿಂದ್ ಕೇಜ್ರಿವಾಲ್​ ತಮ್ಮ ಭಾಷಣದಲ್ಲಿ ಹನುಮಂತನಿಗೆ ವಿಶೇಷ ಕೃತಜ್ಞತೆ ಹೇಳಿದ್ದರು.
ಇದೀಗ ಆಪ್​ ಶಾಸಕ ಸೌರಭ ಭಾರದ್ವಾಜ್​ ಅವರು ತಮ್ಮ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರವನ್ನು ಹನುಮನಿಗೇ ಮೀಸಲಿಡಲಾಗುವುದು ಎಂದಿದ್ದಾರೆ.
ಪ್ರತಿ ಮಂಗಳವಾರ ಗ್ರೇಟ್ ಕೈಲಾಶ್​ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ, ಸುಂದರಕಾಂಡದ ಅಧ್ಯಾಯಗಳ ಬೋಧನೆ, ಪಾರಾಯಣ, ಹನುಮ ಸ್ತೋತ್ರ ಪಠಣಗಳನ್ನು ನಡೆಸಲಾಗುವುದು. ಈ ಬಗ್ಗೆ ಏನೇ ಹೆಚ್ಚಿನ ಮಾಹಿತಿ ಬೇಕಾದರೂ ನನಗೆ ಕರೆ ಮಾಡಬಹುದು ಎಂದು ಸೌರಭ್​ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಹನುಮ ದೇವಾಲಯದಲ್ಲಿ ಅಪವಿತ್ರವಾಗಿ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
