ಚಂಡೀಗಢ:ಹಿಸಾರ್​-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 2-3 ರ ಮಧ್ಯರಾತ್ರಿ ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಗೋಗಾ ಮೇಡಿಧಾಮಕ್ಕೆ ಹೋಗುತ್ತಿದ್ದ ಭಕ್ತರು ತುಂಬಿದ್ದ ಪಿಕಪ್ ವ್ಯಾನ್‌ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದಿದೆ.ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ.
ಮಾಹಿತಿಯ ಪ್ರಕಾರ, ಗಾಯಾಳುಗಳನ್ನು  ನರ್ವಾನಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರ ಸ್ಥಿತಿಯ ತೀವ್ರತೆಯಿಂದಾಗಿ ಅವರನ್ನು ಆಗ್ರೋಹಾಗೆ  ಕರೆದುಕೊಂಡು ಹೋಗುವಂತೆ ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
ಒಟ್ಟು 16 ಮಂದಿ ಯಾತ್ರಿಕರು ಕುರುಕ್ಷೇತ್ರದ ಮಾರ್ಚೇಡಿ ಗ್ರಾಮದ ನಿವಾಸಿಗಳಾಗಿದ್ದು, ಪಿಕಪ್ ವ್ಯಾನ್​ನಲ್ಲಿ  ರಾಜಸ್ಥಾನದ ಗೋಗಾ ಮೇಡಿ ಧಾಮ್‌ಗೆ ತೆರಳುತ್ತಿದ್ದರು. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಅವರು ನರ್ವಾನಾದ ಬಿರ್ಧಾನ ಗ್ರಾಮದ ಬಳಿ ತಲುಪಿದಾಗ, ವೇಗವಾಗಿ ಬಂದ ಟ್ರಕ್ ಹಿಂದಿನಿಂದ ಪಿಕಪ್​ ವ್ಯಾನ್​​ಗೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿತು.
ವಾಹನಗಳಲ್ಲಿ  ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ರಕ್ಷಿಸಲು ಪ್ರಯತ್ನಿಸಿದರು, ಆದರೆ ಕತ್ತಲೆಯಿಂದಾಗಿ ಅವರ ಪ್ರಯತ್ನಗಳು ವಿಫಲವಾಗಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
